Ad Widget

ಗುತ್ತಿಗಾರು : ಗಾಂಧಿಜಯಂತಿ ಅಂಗವಾಗಿ ಬಿಜೆಪಿ ನೇತೃತ್ವದಲ್ಲಿ ನದಿಗಳ ಸ್ವಚ್ಚತೆ

ಗಾಂಧಿಜಯಂತಿ ಅಂಗವಾಗಿ ಬಿಜೆಪಿ ಗುತ್ತಿಗಾರು ಗ್ರಾಮ ಸಮಿತಿ ನೇತೃತ್ವದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪದಲ್ಲಿ ಹರಿಯುವ ಶಂಖತೀರ್ಥ ನದಿಯ ಸ್ವಚ್ಚತಾ ಕಾರ್ಯಕ್ರಮ ಇಂದು ನಡೆಯಿತು. ದೇವಳದ ಸುತ್ತ ಹರಿಯುವ ನದಿಯಲ್ಲಿ ಬೆಳೆದ ಕಾಡು ಗಿಡಗಳು ಹಾಗೂ ತ್ಯಾಜ್ಯ ಪ್ಲಾಸ್ಟಿಕ್ ಮತ್ತು ಹುಲ್ಲು ಗಳನ್ನು ಕಡಿದು ಸ್ವಚ್ಛ ಗೊಳಿಸಲಾಯಿತು.
ಈ ಸ್ವಚ್ಚತಾ ಕಾರ್ಯದಲ್ಲಿ ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಜಿಲ್ಲಾ ಸಮಿತಿ ಸದಸ್ಯ ವೆಂಕಟ್ ದಂಬೆಕೋಡಿ, ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಸುಳ್ಯ ಮಂಡಲ ಪ್ರ.ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಜಿ.ಪಂ.ಮಾಜಿ ಸದಸ್ಯ ಗಂಗಾಧರ ಕೇಪಳಕಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!