Ad Widget

ಮಡಪ್ಪಾಡಿ : ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿದ್ದ ಬಳ್ಳಿ ಸಿಲುಕಿ ಮೃತ್ಯು

ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿ ಇದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೇವಳದಲ್ಲಿ ನಡೆದಿದೆ.

ಕೇವಳ ಹೂವಪ್ಪ ಗೌಡರವರು ಮಧ್ಯಾಹ್ನ ವೇಳೆ ತನ್ನ ಮನೆಯ ಎದುರಿನ ಸಣ್ಣ ಗಾತ್ರದ ಮರದ ಗೆಲ್ಲು ಕಡಿಯಲು ಹತ್ತಿದ್ದರು. ಗೆಲ್ಲು ಬೀಳುವ ಸಂದರ್ಭದಲ್ಲಿ ಮರದಲ್ಲಿದ್ದ ಹಬ್ಬಿದ್ದ ಬಳ್ಳಿಗೆ ಅವರು ಆಕಸ್ಮಿಕವಾಗಿ ಸಿಲುಕಿದರೆನ್ನಲಾಗಿದೆ. ಬಳ್ಳಿ ಅವರ ದೇಹಕ್ಕೆ ಸಿಲುಕಿ ಬಿಗಿದಿದ್ದು ಇದನ್ನು ಕಂಡ ಮನೆಯವರು ಹಾಗೂ ಅಕ್ಕಪಕ್ಕದ ಮನೆಯವರು ಅವರನ್ನು ಕೆಳಗಿಳಿಸಿ ಸುಳ್ಯ ಸರಕಾರಿ ಆಸ್ಪತ್ರೆಗೆ ತಂದರಾದರೂ, ಅದಾಗಲೇ ಅವರು ಮೃತಪಟ್ಟಿದ್ದರೆಂದು ತಿಳಿದು ಬಂದಿದೆ. ಮೃತರು ಪತ್ನಿ ಮೀನಾಕ್ಷಿ, ಪುತ್ರಿ ಮನಸ್ವಿ, ಪುತ್ರ ಮನ್ವಿತ್ ರನ್ನು ಅಗಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!