

ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಏಕಾಹ ಭಜನೆ ಹಾಗೂ ಕಾರ್ತಿಕ ಪೂರ್ಣಿಮೆಯ ಲಕ್ಷದೀಪ ಉತ್ಸವಗಳು ನ.14ರಿಂದ ನ.20ರ ತನಕ ವಿಜೃಂಭಣೆಯಿಂದ ನಡೆಯಲಿದೆ. ನ.14 ಆದಿತ್ಯವಾರದಂದು ಬೆಳಗ್ಗೆ 10.00 ಗಂಟೆಗೆ ಪ್ರಾರ್ಥನೆ, ಬಳಿಕ ಪಂಡಿತ್ ದೇವರಾಯ ಕಿಣಿ ಮತ್ತು ಬಳಗದವರಿಂದ ಸಂತವಾಣಿ ಕಾರ್ಯಕ್ರಮ ನಡೆಯಲಿದೆ. ನ.15 ಸೋಮವಾರದಂದು ಬೆಳಗ್ಗೆ 10.00 ಗಂಟೆಗೆ ದೀಪೋಜ್ವಲನ, ಏಕಾಹ ಭಜನೆ, ರಾತ್ರಿ 10.00 ಗಂಟೆಯಿಂದ ಮಹಾಪೂಜೆ ನಡೆಯಲಿದೆ. ಉಳಿದಂತೆ ನ.20ರ ತನಕ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವುದು. ನ.19ರಂದು ಕಾರ್ತಿಕ ಪೌರ್ಣಮಿ, ಲಕ್ಷದೀಪ ಉತ್ಸವ, ರಾತ್ರಿ ನಂತರ ಲಾಲ್ಕಿಯಲ್ಲಿ ಉತ್ಸವ ಜರುಗಲಿದೆ. ಪ್ರತಿದಿನ ಮಧ್ಯಾಹ್ನ 12.00 ಗಂಟೆಗೆ ದೇವಸ್ಥಾನದ ಉಭಯ ದೇವರಿಗೆ ಪೂಜೆ, ಭೂರಿಭೋಜನ ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರುಗಳ ಕೃಪೆಗೆ ಪಾತ್ರರಾಗುವಂತೆ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ವಿನಂತಿಸಿದ್ದಾರೆ.