Ad Widget

ದೇವಚಳ್ಳ: ಅಚ್ರಪ್ಪಾಡಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ಸ.ಕಿ.ಪ್ರಾ.ಶಾಲೆ ಅಚ್ರಪ್ಪಾಡಿ ಇಲ್ಲಿ ನ.26 ಶುಕ್ರವಾರದಂದು "ಸಂವಿಧಾನ ದಿನಾಚರಣೆ"ಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಶಾಲಾ ಮಕ್ಕಳು, ಶಾಲಾ ಶಿಕ್ಷಕರು ಹಾಗೂ ಶಾಲಾ ಅಡುಗೆ ಸಿಬ್ಬಂದಿಯವರೆಲ್ಲರು ಸೇರಿ ಸ್ವೀಕರಿಸಿದರು. ಸಂವಿಧಾನದ ಮಹತ್ವ ಮತ್ತು ಸಂವಿಧಾನ ಪ್ರಸ್ತಾವನೆಯ ಬಗ್ಗೆ ಹಾಗೂ ಸಂವಿಧಾನ ರಚನೆಯ ವಿಧಿ ವಿಧಾನಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಲಾಯಿತು. ನಂತರ 11:15ಕ್ಕೆ...

ಬಾಳಿಲ: ವಿದ್ಯಾಬೋಧಿನೀ ಹಿ.ಪ್ರಾ.ಶಾಲೆಯಲ್ಲಿ ಸಂವಿಧಾನ ದಿನಾಚರಣೆ

ನ.26ರಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲದಲ್ಲಿ "ಸಂವಿಧಾನ ದಿನಾಚರಣೆ"ಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಗುರುಗಳು, ಶಾಲಾಶಿಕ್ಷಕರು, ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಮೂರ್ತಿ ಇವರು ಮಕ್ಕಳಿಗೆ ನಮ್ಮ ಸಂವಿಧಾನ ಪ್ರಸ್ತಾವನೆಯ ಮಹತ್ವವನ್ನು ತಿಳಿಸಿದರು.
Ad Widget

ಸುಳ್ಯ: ಶ್ರೀ ಶಾರದಾ ಮಹಿಳಾ ಕಾಲೇಜಿನಲ್ಲಿ ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ

ಶ್ರೀ ಶಾರದಾ ಮಹಿಳಾ ಕಾಲೇಜಿನಿನಲ್ಲಿ ನ. 26 ರಂದು ಸಂವಿಧಾನ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿನಿಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕೊಲ್ಲಮೊಗ್ರ : ವನಮಹೋತ್ಸವದಂದು ನೆಟ್ಟ ಗಿಡಗಳ ಆರೈಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯದ ವತಿಯಿಂದ 2021 ಜುಲೈ 29 ರಂದು ವನಮಹೋತ್ಸವ ದಿನಾಚರಣೆಯ ಅಂಗವಾಗಿ "ಹಸಿರು ಬೆಳೆಸಿ, ಉಸಿರು ಉಳಿಸಿ" ಕಾರ್ಯಕ್ರಮದಲ್ಲಿ ಕಲ್ಮಕಾರು ಭಜನಾ ಮಂದಿರ, ಗಡಿಕಲ್ಲು ರುದ್ರ ಭೂಮಿಯ ಸುತ್ತ, ಕೊಲ್ಲಮೊಗ್ರು ಬಂಗ್ಲೆಗುಡ್ಡೆ ಪ್ರಾಥಮಿಕ ಶಾಲಾ ವಠಾರ, ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರ, ಅರಣ್ಯ...
error: Content is protected !!