Ad Widget

ಕೆ.ಟಿ.ವಿಶ್ವನಾಥರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ರಿಗೆ ಸಾಂಸ್ಕೃತಿಕ ಸಂಘಟನೆಗಾಗಿ ಏಷಿಯಾ ವೇದಿಕ್ ಕಲ್ಚುರಲ್ ರಿಸರ್ಚ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮ ಹೊಸೂರ್ ನಲ್ಲಿ ಪದವಿ ಪ್ರಧಾನ ಕಾರ್ಯಕ್ರಮ ನಡೆಯಿತು.
ಸಾಂಸ್ಕ್ರತಿಕ ಮತ್ತು ಕ್ರೀಡಾ ಸಂಘಟನೆಯಲ್ಲಿ ತೊಡಗಿಕೊಂಡಿರುವ ಕೆ.ಟಿ.ವಿಶ್ವನಾಥ ರವರು ಕರ್ನಾಟಕ ಜಾನಪದ ಪರಿಷತ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷರಾಗಿ,ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಯಾಗಿ,ಎನ್ಬೆಂಸಿ ಹಿರಿಯ ವಿದ್ಯಾರ್ಥಿ ಸಂಘದ ಪ್ರ.ಕಾರ್ಯದರ್ಶಿಯಾಗಿ, ದುಗಲಡ್ಕ ಕುರಲ್ ತುಳುಕೂಟದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾಗಿ, ಕೊಯಿಕುಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ,ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹೀಗೆ ಹಲವಾರು ಸಂಘ ಸಂಸ್ಥೆಗಳ ಅಧ್ಯಕ್ಷರಾಗಿ, ಪದಾಧಿಕಾರಿಯಾಗಿ ದುಡಿದಿದ್ದಾರೆ. ನಾಟಕ ಕಲಾವಿದರಾಗಿಯೂ ಹಲವಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!