Ad Widget

ಸಾತ್ವಿಕ್ ಹೊಸೊಳಿಕೆ ಹುಟ್ಟುಹಬ್ಬ

ಗುತ್ತಿಗಾರು ಗ್ರಾಮದ ಹೊಸೊಳಿಕೆ ಕುಶಾಲಪ್ಪ ಗೌಡರ ಪುತ್ರ ಸಾತ್ವಿಕ್ ರವರ 9ನೇ ವರ್ಷದ ಹುಟ್ಟುಹಬ್ಬವನ್ನು ಅವರ ಮನೆಯಲ್ಲಿ ಆಚರಿಸಿಕೊಳ್ಳಲಾಯಿತು.

ಸುಳ್ಯದಲ್ಲಿ ನಾಳೆ (ನ.23)ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗದ ವ್ಯಾಪ್ತಿಯ 33/11ಕೆ.ವಿ. ದ್ವಿ ಮಾರ್ಗದ ರಚನೆಯ ಕಾಮಗಾರಿ ನಡೆಯುತ್ತಿರುವುದರಿಂದ ನ. 23 ರಂದು ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಪೀಡರ್ ಗಳಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ad Widget

ಎನ್ನೆಂಸಿ: ವೋಟರ್ ಹೆಲ್ಪ್ ಲೈನ್ ಬಗ್ಗೆ ತರಬೇತಿ ಕಾರ್ಯಕ್ರಮ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನರಾಜ್ಯಶಾಸ್ತ್ರ ವಿಭಾಗ, ಚುನಾವಣಾಸಾಕ್ಷರತಾ ಸಂಘ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶ ಇವುಗಳ ಆಶ್ರಯದಲ್ಲಿವೋಟರ್ ಹೆಲ್ಪ್ ಲೈನ್ ಬಗ್ಗೆ ತರಬೇತಿ ಕಾರ್ಯಕ್ರಮನವೆಂಬರ್ 12ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಸುಳ್ಯ ತಾಲೂಕು ತಹಶೀಲ್ದಾರರಾದಕು. ಅನಿತಾಲಕ್ಷ್ಮಿ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕ್ಷೇತ್ರ...

ಪಂಜ : ಪ್ರಕೃತಿ ಡಿಜಿಟಲ್ ಸ್ಟುಡಿಯೋ ಶುಭಾರಂಭ

ಗುತ್ತಿಗಾರಿನಲ್ಲಿ ಕಳೆದ 27 ವರ್ಷಗಳಿಂದ ಕಾರ್ಯಚರಿಸುತ್ತಿರುವ ಪ್ರಕೃತಿ ಡಿಜಿಟಲ್ ಸ್ಟುಡಿಯೋ & ವಿಡಿಯೋ ಇದರ ಸಹ ಸಂಸ್ಥೆ ಪಂಜದ ವಾಣಿಶ್ರೀ ಕಾಂಪ್ಲೆಕ್ಸ್ ನಲ್ಲಿ ನ.12 ರಂದು ಗಣಹೋಮದೊಂದಿಗೆ ಶುಭಾರಂಭಗೊಂಡಿತು. ಮಾಜಿ ಮಂಡಲ ಪ್ರಧಾನರಾದ ಮುಳಿಯ ತಿಮ್ಮಪ್ಪಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಕೃತಿ ಸ್ಟುಡಿಯೋ ಮಾಲಕರಾದ ಶಿವರಾಮ್ ದೇವ ಹಾಗೂ ಶ್ರೀಮತಿ ಯಶೋಧ ಶಿವರಾಮ್...

SDPI ಕರ್ನಾಟಕ ರಾಜ್ಯದ ನೂತನ ಕಾರ್ಯದರ್ಶಿಯಾಗಿ “ಶಾಫಿ ಬೆಳ್ಳಾರೆ” ಆಯ್ಕೆ

ಸುಳ್ಯ:- ಎಸ್‌ಡಿಪಿಐ ಪಕ್ಷದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಫಿ ಬೆಳ್ಳಾರೆ ಮತ್ತು ಆನಂದ ಮಿತ್ತಬೈಲ್ ರಾಜ್ಯ ಕಾರ್ಯದರ್ಶಿ ಗಳಾಗಿ ಆಯ್ಕೆ ಯಾಗಿದ್ದಾರೆ.ನವೆಂಬರ್ 6 ಮತ್ತು 7 ರಂದು ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ ಪ್ರತಿನಿಧಿ ಸಭೆಯಲ್ಲಿ 2021-24 ರ ಅವಧಿಗೆ ನಡೆದ ಆಂತರಿಕ ಚುನಾವಣೆಯಲ್ಲಿ ನೂತನ...

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ : ಸ್ಥಳೀಯ ಸಂಸ್ಥೆಗಳ ಸಾಮಾನ್ಯ ಸಭೆ,ಗ್ರಾಮ ಸಭೆ, ಗುದ್ದಲಿ ಪೂಜೆ, ಉದ್ಘಾಟನೆಗೆ ನಿರ್ಬಂಧ

ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯದ ಒಟ್ಟು 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 24 ರಂದು ನಾಮಪತ್ರಗಳ ಪರಿಶೀಲನೆ...

ಮರಕತ ದೇವಸ್ಥಾನಕ್ಕೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ

ಮರಕತ ದೇವಸ್ಥಾನಕ್ಕೆ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರ ಜನ್ಮ ದಿನದ ಅಂಗವಾಗಿ ದೇವರ ದರ್ಶನ ಪಡೆದು ನದಿಯಲ್ಲಿರುವ ದೇವರ ಮೀನಿಗೆ ಆಹಾರವನ್ನು ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ನಡುಗಲ್ಲು, ಚಾಮಯ್ಯ ಚೆಮ್ನೂರು....

ತೀರ್ಥಪ್ರಸಾದ್ -ಶ್ರುತಿ

ಜಾಲ್ಸೂರು ಗ್ರಾಮದ ಬೈತಡ್ಕ ಕಾಜಿಮಡ್ಕ ದಿ. ನಾರಾಯಣ ಗೌಡರ ಪುತ್ರ ತೀರ್ಥಪ್ರಸಾದ್ ರ ವಿವಾಹ ನಿಶ್ಚಿತಾರ್ಥವು ಮಡಪ್ಪಾಡಿ ಗ್ರಾಮದ ಬಲ್ಕಜೆ ಪಾರೆಪ್ಪಾಡಿ ನೀಲಪ್ಪ ಗೌಡರ ಪುತ್ರಿ ಶ್ರುತಿಯೊಂದಿಗೆ ನ.10 ರಂದು ವಧುವಿನ ಮನೆಯಲ್ಲಿ ನಡೆಯಿತು.

ಶುಭವಿವಾಹ: ಗಾಯತ್ರಿ- ಸತೀಶ್ ಕುಮಾರ್

ಅಮರಮುಡ್ನೂರು ಗ್ರಾಮದ ಕಟ್ಟದಮಜಲು ಶ್ರೀಮತಿ ವಸಂತಿ ಮತ್ತು ಶ್ರೀ ಹರಿಶ್ಚಂದ್ರ ಗೌಡರ ಪುತ್ರಿ ಗಾಯತ್ರಿಯವರ ವಿವಾಹವು ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೇಂಕನಾಜೆ ದಿ|ರಾಮಣ್ಣ ಗೌಡರ ಪುತ್ರ ಸತೀಶ್ ಕುಮಾರ್ ರೊಂದಿಗೆ ನ.11ರಂದು ಕುಕ್ಕುಜಡ್ಕ ಸಹಕಾರಿ ಸಂಘದ 'ಅಮರ ಸಹಕಾರ ಸೌಧ' ಸಭಾಭವನದಲ್ಲಿ ನಡೆಯಿತು.

ಹರಿಹರಪಲ್ಲತ್ತಡ್ಕ : ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆಯಿಂದ ಜೇನು ಕೃಷಿ ಬಗ್ಗೆ ಮಾಹಿತಿ

ಗ್ರಾಮಜನ್ಯ ರೈತ ಉತ್ಪಾದಕ ಸಂಸ್ಥೆ ಪುತ್ತೂರು ಇದರ ವತಿಯಿಂದ ನ.10 ರಂದು ಪೂರ್ವಾಹ್ನ 10:30 ಕ್ಕೆ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹಾಗೂ ಅಪರಾಹ್ನ 02:30 ಕ್ಕೆ ವಳಲಂಬೆ ಶ್ರೀ ಶಂಖಪಾಲ ದೇವಸ್ಥಾನದ ಸಭಾಂಗಣದಲ್ಲಿ ಒಪ್ಪಂದ ಆಧಾರಿತ ಜೇನು ಕೃಷಿ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರುಗಳಾದ ಮೂಲಚಂದ್ರ ಆರ್ಯಾಪು, ರಾಮ್ ಪ್ರತೀಕ್...
Loading posts...

All posts loaded

No more posts

error: Content is protected !!