Ad Widget

ದೇವ : ಕೆರೆಯಲ್ಲಿ ಪತ್ತೆಯಾದ ಮೊಸಳೆ – ಅರಣ್ಯ ಇಲಾಖೆಯಿಂದ ಸೆರೆ

ದೇವಚಳ್ಳ ಗ್ರಾಮದ ದೇವದಲ್ಲಿ ಮೊಸಳೆ ಪತ್ತೆಯಾಗಿದ್ದು ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ಸೆರೆಹಿಡಿದ ಘಟನೆ ನ.10 ರಂದು ನಡೆದಿದೆ. ದೇವ ಬಾಲಕೃಷ್ಣ ಗೌಡರ ತೋಟದ ಕೆರೆಯಲ್ಲಿ ನ.10 ರಂದು ಬೆಳಿಗ್ಗೆ ಪತ್ತೆಯಾದ ಮೊಸಳೆಯನ್ನು ಅರಣ್ಯ ಇಲಾಖೆಯವರು ತಡರಾತ್ರಿಯವರೆಗೆ ಕಾರ್ಯಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಕಾರ್ಯಚರಣೆಯಲ್ಲಿ ಸುಳ್ಯ ವಲಯಾರಣ್ಯಾಧಿಕಾರಿ ಗಿರೀಶ್, ಉಪವಲಯಾರಣ್ಯಾಧಿಕಾರಿ ರವೀಂದ್ರ , ಅರಣ್ಯ ರಕ್ಷಕ...

ಮಡಪ್ಪಾಡಿ: ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಅಶ್ರುತರ್ಪಣ ಕಾರ್ಯಕ್ರಮ

"ನಿಮ್ ತರ ಬದುಕೋಕೆ ಪ್ರಯತ್ನ…ನೀವೇ ನಮ್ ಬದುಕಿನ ರಾಜರತ್ನ…..ಮನುಷ್ಯನಿಂದ ದೇವರಾಗಿ ನಿಮ್ಮ ಹುಟ್ಟು ಇದು ಸಾವಲ್ಲ……ಜೊತೆಗಿರದ ಜೀವ ಎಂದೆಂದಿಗೂ ಜೀವಂತ……" ಎಳೆಯ ವಯಸ್ಸಿನಲ್ಲಿ ಅಕಾಲಿಕ ಮರಣ ದವಡೆಗೆ ಸಿಲುಕಿ ಭಗವಂತನ ಪಾದ ಸೇರಿದ ಕರುನಾಡಿನ ಕಣ್ಮಣಿ ಪುನೀತ್ ರಾಜ್ ಕುಮಾರ್ ರಿಗೆ ಮಡಪ್ಪಾಡಿಯ ಯುವಕ ಮಂಡಲ ಸಭಾಭವನದಲ್ಲಿ ಅಶ್ರುತರ್ಪಣ ಕಾರ್ಯಕ್ರಮ ನೆರವೇರಿಸಲಾಯಿತು. ಸುಳ್ಯ ಎಪಿಎಂಸಿ ಅಧ್ಯಕ್ಷರಾದ...
Ad Widget

ತೀರ್ಥಪ್ರಸಾದ್ -ಶ್ರುತಿ

ಜಾಲ್ಸೂರು ಗ್ರಾಮದ ಬೈತಡ್ಕ ಕಾಜಿಮಡ್ಕ ದಿ. ನಾರಾಯಣ ಗೌಡರ ಪುತ್ರ ತೀರ್ಥಪ್ರಸಾದ್ ರ ವಿವಾಹ ನಿಶ್ಚಿತಾರ್ಥವು ಮಡಪ್ಪಾಡಿ ಗ್ರಾಮದ ಬಲ್ಕಜೆ ಪಾರೆಪ್ಪಾಡಿ ನೀಲಪ್ಪ ಗೌಡರ ಪುತ್ರಿ ಶ್ರುತಿಯೊಂದಿಗೆ ನ.10 ರಂದು ವಧುವಿನ ಮನೆಯಲ್ಲಿ ನಡೆಯಿತು.

ಸುಬ್ರಹ್ಮಣ್ಯ: ಕುಸುಮ ಸಾರಂಗದ ವತಿಯಿಂದ ಕೆಯಸ್‍ಯಸ್ ಕಾಲೇಜಿನಲ್ಲಿ ದೀಪಾವಳಿ ಆಚರಣೆ

ಸುಬ್ರಹ್ಮಣ್ಯದ ಕೆಯಸ್‍ಯಸ್ ಕಾಲೇಜಿನ ರಂಗಘಟಕ ಕುಸುಮ ಸಾರಂಗದ ವತಿಯಿಂದ ಕಾಲೇಜಿನಲ್ಲಿ ರಂಗ ಬೆಳಕು ಎಂಬ ಹೆಸರಿನಲ್ಲಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ.ಗೋವಿಂದ ಎನ್.ಎಸ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್ ಸ್ಕಂದ, ರಂಗ ನಿರ್ದೇಶಕ ಪ್ರವೀಣ್ ಎಡಮಂಗಲ, ಉಪನ್ಯಾಸಕ ವಿನ್ಯಾಸ್...

ಇರುವಂಬಳ್ಳ ಶಾಲೆಗೆ ಊಟದ ತಟ್ಟೆ ಕೊಡುಗೆ

ಅಜ್ಜಾವರ ಗ್ರಾಮ ಪಂಜಾಯತ್ ಮಾಜಿ ಅಧ್ಯಕ್ಷರಾದ ಕರುಣಾಕರ ಆಡ್ಪoಗಾಯ ಹಾಗೂ ಮನೆಯವರು ಇರುವಂಬಳ್ಳ ಸರಕಾರಿ ಕಿರಿಯ ಪ್ರಾಧಾಮಿಕಾ ಶಾಲೆಗೆ ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕರುಣಾಕರ ಆಡ್ಪoಗಾಯ ಶ್ರೀಮತಿ ಪುಷ್ಪಲತಾ ಕರುಣಾಕರ ಅಡ್ಪಂಗಾಯ, ಅಜ್ಜಾವರ ಗ್ರಾಮ ಪಂಜಾಯತ್ ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಜ್ಜಾವರ ಗ್ರಾಮ.ಪಂ. ಸದ್ಯಸರಾದ ರಾಹುಲ್ ಆಡ್ಪoಗಾಯ, ಅಬ್ಬಾಸ್ ಎ.ಬಿ. ಅಡ್ಕ,...

ಡಾ. ಅನುರಾಧಾ ಕುರುಂಜಿಯವರಿಂದ ಶಿವರಾಮ ಕಾರಂತರ “ಬೆಟ್ಟದ ಜೀವ” ಕೃತಿ ಅರೆಭಾಷೆಗೆ

ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಶಿವರಾಮ ಕಾರಂತರ ಬೆಟ್ಟದ ಜೀವ ಕೃತಿಯನ್ನು ಅರೆಭಾಷೆಗೆ ಅನುವಾದಿಸಲು ಉದ್ದೇಶಿಸಿದ್ದು, ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಅನುರಾಧಾ ಕುರುಂಜಿ ಯವರಿಗೆ ಅನುವಾದಿಸಿಕೊಡಲು ಅನುಮತಿ ಹಾಗೂ ಅನುದಾನವನ್ನು ನೀಡಿರುತ್ತದೆ. ಇವರು ಈಗಾಗಲೇ ನಾಲ್ಕು ಸ್ವತಂತ್ರ ಕೃತಿಗಳನ್ನು ಸಹೃದಯ ಲೋಕಕ್ಕೆ ಅರ್ಪಿಸಿದ್ದು, ಐದನೇ ಕೃತಿ "ಜೀವನ ಪಯಣ" ಕವನ...

ಮುರುಳ್ಯ : ಯುವತಿಗೆ ಕೈ ಸನ್ನೆ ಮಾಡಿದವನ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲು-ಜಾಮೀನು

ಮುರುಳ್ಯ ಗ್ರಾಮದ ಅಲೆಕ್ಕಾಡಿಯಲ್ಲಿ ಯುವತಿಯೊಬ್ಬಳು ಯುವಕನೋರ್ವ ಅಸಹ್ಯವಾಗಿ ವರ್ತಿಸಿದ್ದಾನೆಂದು ಪೊಲೀಸು ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ ಘಟನೆ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನವಾಜ್ ಎಂಬ ಯುವಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ‌ನ್ಯಾಯಾಲಯ ಜಾಮೀನು ನೀಡಿರುವುದಾಗಿ ತಿಳಿದು ಬಂದಿದೆ. ಅಲೆಕ್ಕಾಡಿಯಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿದ್ದ ಕಲ್ಮಡ್ಕದ ಕಜೆ ನವಾಜ್ (29)...

ಕೊಡಿಯಾಲ ಗ್ರಾಮ ಪಂಚಾಯತ್ ಗ್ರಾಮ ಸಭೆ – ಇಲಾಖಾಧಿಕಾರಿಗಳಿಂದ ಮಾಹಿತಿ

ಕೊಡಿಯಾಲ ಗ್ರಾಮ ಪಂಚಾಯತ್ 2021-22 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜ್ರಂಗಳರವರ ಅಧ್ಯಕ್ಷತೆಯಲ್ಲಿ ನ.8 ರಂದು ಪಂಚಾಯತ್ ಆವರಣದಲ್ಲಿ ನಡೆಯಿತು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಹರ್ಷನ್ ಕೆ.ಟಿ, ಸದಸ್ಯರಾದ ಕರುಣಾಕರ ಆಳ್ವ, ಶ್ರೀಮತಿ ಚಿತ್ರ, ಶ್ರೀಮತಿ ವಿಜಯಕುಮಾರಿ, ಶ್ರೀಮತಿ ಯಶವಂತಿ ಉಪಸ್ಥಿತರಿದ್ದರು.ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ...

ನ.10 : ಸುಳ್ಯ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಸುಳ್ಯ ನಗರ ಪಂಚಾಯತ್ ನ ಕಲ್ಲುಮುಟ್ಲು ನೀರು ಶುದ್ಧೀಕರಣ ಘಟಕದಲ್ಲಿ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸುವ ಕಾರ್ಯ ಇರುವುದರಿಂದ ನವೆಂಬರ್ 10 ಬುಧವಾರದಂದು ಸುಳ್ಯ ನಗರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ತಿಳಿಸಿದ್ದಾರೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ. ಪೋಲೀಸ್ ಠಾಣಾ ಕಾಮಗಾರಿ ಶೀಘ್ರ- ಸಚಿವರಿಂದ ಭರವಸೆ

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಮಾಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಆಶಿರ್ವಾದ ಪಡೆದರು. ಶ್ರೀಗಳು ಸಚಿವರಿಗೆ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಣಾಧಿಕಾರಿ ಡಾ|ನಿಂಗಯ್ಯ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ...
Loading posts...

All posts loaded

No more posts

error: Content is protected !!