- Thursday
- April 23rd, 2026
ಪಾಲೆಪ್ಪಾಡಿ ಇರ್ವೆರ್ ಉಳ್ಳಾಕ್ಲು ಚಾವಡಿಯ ವಠಾರದಲ್ಲಿ ಸ್ವರ್ಣ ಇಡುವ ಕಾರ್ಯಕ್ರಮ ಹಾಗೂ ಅಷ್ಟಮಂಗಲ ಕಾರ್ಯಕ್ರಮವು ನ.29 ರಿಂದ ಡಿ.2 ರವರೆಗೆ ನಡೆಯಿತು. ಶಶಿಧರನ್ ನಾಯರ್ ಕುತ್ತಿಕೋಳು ಇವರ ನೇತೃತ್ವದಲ್ಲಿ ಅಷ್ಟಮಂಗಲ ನಡೆದು ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ನಡೆಯಿತು. ಈ ಪುಣ್ಯ ಕಾರ್ಯದಲ್ಲಿ ಪಾಲೆಪ್ಪಾಡಿ ಬೈಲಿನ ಭಕ್ತಾಭಿಮಾನಿಗಳು ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಶಿಕ್ಷಣ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಇವರು ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರಕಾರ ತರಾತುರಿಯಲ್ಲಿ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಜಲಜೀವನ್ ಮಿಷನ್ ಆಶ್ರಯದಲ್ಲಿ ಮಾಹಿತಿ ಕಾರ್ಯಕ್ರಮ ನೆರವೇರಿತು. ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್ ನೋಡಲ್ ಅಧಿಕಾರಿ ಜಲಜೀವನ್ ಮಿಷನ್ ಇವರು ನೀರಿನ ಬಳಕೆ, ಸ್ವಚ್ಛತೆ ಸರಬರಾಜು, ವ್ಯವಸ್ಥೆ ,ನೀರು ಇಂಗಿಸುವ ಕ್ರಮ ಇತ್ಯಾದಿಗಳ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೀಡಿದರು. ಪಂಚಾಯತು ಸಿಬ್ಬಂದಿ ವಸಂತ್...
