Ad Widget

ಸುಬ್ರಹ್ಮಣ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯದ ವತಿಯಿಂದ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಕಡಬ, ಇಚ್ಲಂಪಾಡಿ, ಗುಂಡ್ಯ, ಗುತ್ತಿಗಾರು ಮಾರ್ಗದಲ್ಲಿ ಬಸ್ಸಿನ ಸಮಸ್ಯೆ ಎದುರಾಗಿದ್ದು, ಈ ಭಾಗದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದನ್ನು ಕೂಡಲೇ ಸರಿಪಡಿಸಿ ಈ ಮಾರ್ಗದಲ್ಲಿ ಬಸ್ ಒದಗಿಸುವಂತೆ ಪ್ರತಿಭಟನೆಯ ಮೂಲಕ ಒತ್ತಾಯಿಸಲಾಯಿತು. ಪ್ರತಿಭಟನೆಯ...

ಸುಳ್ಯ :- ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ ಮರಗಳ ತೆರವು

ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ಕೊಟೆಲು ಅಡಿಕೆಹಿತ್ಲು ಎಂಬಲ್ಲಿ ಕಿಂಡಿ ಅಣೆಕಟ್ಟು ಮರದ ದಿಮ್ಮಿಗಳಿಂದ ತುಂಬಿದ್ದು, ನೀರು ಸರಿಯಾಗಿ ಹರಿಯುತ್ತಿರಲಿಲ್ಲ. ಇದನ್ನು ಮನಗಂಡ ದೊಡ್ಡತೋಟ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಡಿಸೆಂಬರ್ 02 ರಂದು ಈ ಅಣೆಕಟ್ಟಿನಲ್ಲಿ ಸಿಲುಕಿದ್ದ ಮರದ ದಿಮ್ಮಿಗಳನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಸಮೀಪದ ಮನೆಯವರಾದ ಶಕುಂತಳಾ ಭಟ್ ಅಡಿಕೆಹಿತ್ಲು ಎಂಬುವವರು...
Ad Widget

ಕಳಂಜ: ಬುಖಾರಿಯಾ ಜುಮಾ ಮಸ್ಜಿದ್ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಕಳಂಜದ ಬುಖಾರಿಯಾ ಜುಮಾ ಮಸ್ಜಿದ್ ನ ಆಡಳಿತ ಮಂಡಳಿಗೆನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಡಿ.01ರಂದು ನಡೆಯಿತು. ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಆಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್.ಕೆ.ಎಚ್, ಕೋಶಾಧಿಕಾರಿಯಾಗಿ ಮಹಮ್ಮದ್.ಕೆ.ಎಂ ಆಯ್ಕೆಯಾದರು.

ಮತದಾರ ಚೀಟಿ ಎಲ್ಲರಿಗೂ ದೊರೆಯಲು ರಾಜ್ಯ ಒಕ್ಕಲಿಗ ಸಂಘ ಕ್ರಮ ಕೈಗೊಳ್ಳಲಿ- ಹೇಮಾನಂದ ಹಲ್ದಡ್ಕ

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಡಿ.12 ರಂದು ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಲು ಹಲವು ಮತದಾರರಲ್ಲಿ ಗುರುತಿನ ಚೀಟಿ ಇಲ್ಲದಿರುವುದರಿಂದ ಎಲ್ಲಾ ಮತದಾರರಿಗೆ ಗುರುತಿನ ಚೀಟಿಯನ್ನು ಒದಗಿಸಲು ರಾಜ್ಯ ಒಕ್ಕಲಿಗರ ಸಂಘವು ಕೂಡಲೇ ಕ್ರಮ ಕೈಗೊಳ್ಳಬೇಕು. ಇದಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಸದಸ್ಯತ್ವ ಮತ್ತು ಡಿಜಿಟಲ್ ಮಾದರಿಯಲ್ಲಿ ಗುರುತಿನ ಚೀಟಿ ದೊರೆಯುವಂತಾಗಬೇಕು...

ಗುತ್ತಿಗಾರು : ಜೆ.ಜೆ ಫಿನ್ ಕಾರ್ಪ್ ನ ಇನ್ಸುರೆನ್ಸ್ ಸೊಲ್ಯೂಷನ್ ನೂತನ ಕಛೇರಿ ಶುಭಾರಂಭ

ಜೆ.ಜೆ. ಫಿನ್ ಕಾರ್ಪ್ ನ ಇನ್ಸುರೆನ್ಸ್ ಸೊಲ್ಯೂಷನ್ ನೂತನ ಕಛೇರಿಯು ಡಿ.2 ರಂದು ಗುತ್ತಿಗಾರಿನ ಎಸ್ ಎಮ್ ಎಸ್ ಜಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಮುಂಡೋಡಿ ನೆರವೇರಿಸಿದರು. ಗುತ್ತಿಗಾರು ಗ್ರಾ.ಪಂ ಸದಸ್ಯರು,ಕಾಂಪ್ಲೆಕ್ಸ್ ಮಾಲಕರಾದ ವೆಂಕಟ್ ವಳಲಂಬೆ ಮೊದಲ ಪಾಲಿಸಿ ಹಸ್ತಾಂತರಿಸಿ ಶುಭ...
error: Content is protected !!