Ad Widget

ಸುಳ್ಯ :- ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ ಮರಗಳ ತೆರವು

ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ಕೊಟೆಲು ಅಡಿಕೆಹಿತ್ಲು ಎಂಬಲ್ಲಿ ಕಿಂಡಿ ಅಣೆಕಟ್ಟು ಮರದ ದಿಮ್ಮಿಗಳಿಂದ ತುಂಬಿದ್ದು, ನೀರು ಸರಿಯಾಗಿ ಹರಿಯುತ್ತಿರಲಿಲ್ಲ. ಇದನ್ನು ಮನಗಂಡ ದೊಡ್ಡತೋಟ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಡಿಸೆಂಬರ್ 02 ರಂದು ಈ ಅಣೆಕಟ್ಟಿನಲ್ಲಿ ಸಿಲುಕಿದ್ದ ಮರದ ದಿಮ್ಮಿಗಳನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಸಮೀಪದ ಮನೆಯವರಾದ ಶಕುಂತಳಾ ಭಟ್ ಅಡಿಕೆಹಿತ್ಲು ಎಂಬುವವರು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಲಘು ಉಪಹಾರದ ವ್ಯವಸ್ಥೆ ಮಾಡಿದರು. ಈ ಸ್ವಚ್ಛತಾ ಕಾರ್ಯದಲ್ಲಿ ಸ್ವಯಂ ಸೇವಕರಾದ ವೇಣುಗೋಪಾಲ್, ಅಚ್ಯುತ, ಸುಂದರ ಚೊಕ್ಕಾಡಿ, ಪ್ರಸಾದ್ ಶ್ರೇಣಿ, ಭುವನ್ ಚೊಕ್ಕಾಡಿ, ವೆಂಕಟ್ರಮಣ.ಡಿ.ಜಿ, ಮೋಹನ್ ಮರ್ಕಂಜ ಮುಂತಾದವರು ಭಾಗವಹಿಸಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!