Ad Widget

ಸುಳ್ಯ ತಾಲೂಕು ಅಕ್ಷರದಾಸೋಹ ಪ್ರಭಾರ ಸಹಾಯಕ ನಿರ್ದೇಶಕರಾಗಿ ಶ್ರೀಮತಿ ವೀಣಾ.ಎಂ.ಟಿ

ಸುಳ್ಯ ತಾಲೂಕು ಅಕ್ಷರದಾಸೋಹ ಪ್ರಭಾರ ಸಹಾಯಕ ನಿರ್ದೇಶಕರಾಗಿ ಶ್ರೀಮತಿ ವೀಣಾ.ಎಂ.ಟಿ ನೇಮಕಗೊಂಡಿದ್ದಾರೆ. ಚಂದ್ರಶೇಖರ ಪೇರಾಲು ಇವರ ನಿವೃತ್ತಿಯಿಂದ ತೆರವಾಗಿರುವ ಈ ಸ್ಥಾನಕ್ಕೆ ಶ್ರೀಮತಿ ವೀಣಾ.ಎಂ.ಟಿ ನೇಮಕಗೊಂಡಿದ್ದು ಅಧಿಕಾರ ವಹಿಸಿಕೊಂಡಿದ್ದಾರೆ.ಇವರು ಸರಕಾರಿ ಪ್ರೌಢಶಾಲೆ ಮರ್ಕಂಜ ಇಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಂಡೆಕೋಲು: ಮುತ್ತಪ್ಪ ಗೌಡ ನಾಪತ್ತೆ- ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲು

ಮಂಡೆಕೋಲು ಗ್ರಾಮದ ಕುತ್ತಿಮುಂಡ ಕುಟುಂಬದ ಶಿವಾಜಿನಗರ ನಿವಾಸಿ ಮುತ್ತಪ್ಪ ಗೌಡ ಅವರು ನ.30ರಂದು ಮನೆಯಿಂದ ಕೆಲಸಕ್ಕೆಂದು ಹೊರಟವರು ಕಾಣೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 48 ವರ್ಷ ಪ್ರಾಯದ ಇವರು ಮಂಡೆಕೋಲಿನಿಂದ ಸುಳ್ಯಕ್ಕೆ ಬಂದು ಅಲ್ಲಿಂದ ಪುತ್ತೂರಿಗೆ ಸರಕಾರಿ ಬಸ್ ಮೂಲಕ ಪ್ರಯಾಣಿಸಿರುವ ಮಾಹಿತಿ ಇದ್ದು ಯಾರಿಗಾದರೂ ಕಂಡುಬಂದಲ್ಲಿ ಸುಳ್ಯ ಠಾಣೆಯನ್ನು...
Ad Widget

ಬಾಳಿಲ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ಕುಕ್ಕೆಯಲ್ಲಿ ಕುಣಿತ ಭಜನಾ ಸೇವೆ

ಬಾಳಿಲ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ಕುಕ್ಕೆಸುಬ್ರಹ್ಮಣ್ಯದಲ್ಲಿ ಡಿ.03ರಂದು ನಡೆದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಕುಣಿತ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಂದ್ರಪ್ಪಾಡಿ :- ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನರ ಪಾತ್ರ ಕಾರ್ಯಕ್ರಮದಲ್ಲಿ ಕೆ.ಎಸ್.ಎಸ್ ಕಾಲೇಜು ವಿದ್ಯಾರ್ಥಿಗಳು ಭಾಗಿ

ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ, ಐಕ್ಯೂಎಸಿ ಹಾಗೂ ಕಾಮರ್ಸ್ ಮತ್ತು ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ನ.30 ರಂದು ಕಂದ್ರಪ್ಪಾಡಿಯ ಪ್ರೀತಮ್ ಮುಂಡೋಡಿ ಅವರ ಗದ್ದೆಯಲ್ಲಿ "ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನರ ಪಾತ್ರ" ಎಂಬ ಕಾರ್ಯಕ್ರಮ ನಡೆಯಿತು.ಈ ಭತ್ತ ನಾಟಿಯ ಕಾರ್ಯಕ್ರಮದಲ್ಲಿ ಕಾಲೇಜಿನ ಅಂತಿಮ ವಾಣಿಜ್ಯ ಎ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪ್ರೀತಮ್ ಮುಂಡೋಡಿ ಅವರ ಮನೆಯವರು ಈ ಕಾರ್ಯಕ್ರಮದಲ್ಲಿ...

ಸಂಪಾಜೆ : ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಕಂದಡ್ಕದ ಯುವಕ ಮೃತ್ಯು

ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೆ ಮೃತಪಟ್ಟ ಭೀಕರ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಡಿ.3 ರ ಮಧ್ಯರಾತ್ರಿ ನಡೆದಿದೆ. ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ಕಾಲನಿ ನಿವಾಸಿ ಸೆಲ್ವ ಮೇಸ್ತ್ರಿ ಪುತ್ರ ವಿನೋದ್ ಕುಮಾರ್ (23) ಮೃತಪಟ್ಟ ಬೈಕ್‌ ಸವಾರ. ಸವಣೂರುನಿಂದ ವಿರಾಜಪೇಟೆ...
error: Content is protected !!