Ad Widget

ಸುಳ್ಯ : ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ – ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಇದರ ವತಿಯಿಂದ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯು ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಡಿ. 7 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಚಿವ ಎಸ್. ಅಂಗಾರ ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಸುಳ್ಯ ಮಂಡಲ ಪ್ರಭಾರಿ ಭರತೇಶ್, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಸ್ವಾಗತಿಸಿ ,ಪ್ರಾಸ್ತಾವಿಕ ಮಾತನಾಡಿದರು. ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ವಂದೇ ಮಾತರಂ ಹಾಡಿದರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಬೋದ್ ಶೆಟ್ಟಿ ಮೇನಾಲ ವಂದಿಸಿದರು , ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಮುಖಂಡರುಗಳಾದ ಹರಿಕೃಷ್ಣ ಬಂಟ್ವಾಳ್, ಸಂತೋಷ್ ಕುಮಾರ್ ಬೊಳಿಯರ್, ದೇವದಾಸ್ ಬಂಟ್ವಾಳ್, ಸುಧೀರ್ ಶೆಟ್ಟಿ ಕಣ್ಣೂರು, ಜಯಂತಿ ನಾಯಕ್, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ಎಸ್. ಎನ್. ಮನ್ಮಥ, ಚನಿಯ ಕಲ್ತಡ್ಕ, ಭಾಗೀರಥಿ ಮುರುಳ್ಯ, ಹರಿಯಪ್ಪ ಸಾಲ್ಯಾನ್, ಜಯಶ್ರೀ ಕರ್ಕೇರ, ಪ್ರಸಾದ್ ಬೆಳ್ತಂಗಡಿ, ಹಾಗೂ ಪಂಚಾಯತ್ ಸದಸ್ಯರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಕಾರ್ಯದಶಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!