Ad Widget

ಸುಬ್ರಹ್ಮಣ್ಯದಲ್ಲಿ ಯುವ ತೇಜಸ್ಸು ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಸಮಾಜ ಸೇವೆಯ ಉದ್ದೇಶವಿಟ್ಟುಕೊಂಡು ಹುಟ್ಟಿಕೊಂಡ ಯುವ ತೇಜಸ್ಸು ವತಿಯಿಂದ ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಸೇವೆ ಡಿ.9 ರಂದು ಲೋಕಾರ್ಪಣೆಗೊಳ್ಳಲಿದೆ. ಯುವ ತೇಜಸ್ಸು ಬಳಗ ನೂರಾರು ಜನರ ನೋವಿಗೆ ಸ್ಪಂದಿಸಿ ಅನಾರೋಗ್ಯಕ್ಕೊಳಗಾದವರ ಚಿಕಿತ್ಸೆಗೆ ನೆರವಾಗುವ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಅಂಬ್ಯುಲೆನ್ಸ್ ಖರೀದಿಗೆ ಬೇಕಾದ ಧನ ಸಹಾಯ ಸಂಗ್ರಹವಾಗಲು ಜನತೆ...

ಹಾಲೆಮಜಲು :ಪುಸ್ತಕ ಗೂಡು ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗುತ್ತಿಗಾರು ಗ್ರಾಮಪಂಚಾಯತ್ ಹಾಗೂ ಮಾಹಿತಿ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಹಾಲೆಮಜಲು ಪ್ರಯಾಣಿಕರ ತಂಗುದಾಣದಲ್ಲಿ ಪುಸ್ತಕ ಗೂಡು ಉದ್ಘಾಟನೆ ಡಿ.08 ರಂದು ನಡೆಯಿತು.ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿಗಳಾದ ಡಾ| ಕೆ.ಎಸ್.ಎನ್ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ...
Ad Widget

ಕುಕ್ಕೆ: ಇಂದು ಪಂಚಮಿ ರಥೋತ್ಸವ – ನಾಳೆ ಬೆಳಿಗ್ಗೆ 6.58 ಕ್ಕೆ ಬ್ರಹ್ಮರಥೋತ್ಸವ

ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯ ದಿನವಾದ ಬುಧವಾರ (ಡಿ.8) ತೈಲಾಭ್ಯಂಜನ ಮತ್ತು ಪಂಚಮಿ ರಥೋತ್ಸವ ನೆರವೇರಲಿದೆ. ರಾತ್ರಿ ವಿಶೇಷ ಪಾಲಕಿ ಉತ್ಸವ ಮತ್ತು ಬಂಡಿ ಉತ್ಸವ ದೇವಳದ ಹೊರಾಂಗಣದಲ್ಲಿ ಜರುಗಲಿದೆ. ರಥೋತ್ಸವದ ಬಳಿಕ ಸವಾರಿ ಕಟ್ಟೆಯಲ್ಲಿ ಕಟ್ಟೆ ಪೂಜೆ ಮತ್ತು ಆಕರ್ಷಣೀಯ “ಕುಕ್ಕೆಬೆಡಿ” ಪ್ರದರ್ಶಿತವಾಗಲಿದೆ.ನಾಳೆ (ಡಿ.9) ಪ್ರಾತಃಕಾಲ...

ಸುಬ್ರಹ್ಮಣ್ಯ- ಹೂವಿನ ತೇರಿನ ಉತ್ಸವ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಚೌತಿ ದಿನವಾದ ಮಂಗಳವಾರ(ಡಿ.07) ರಾತ್ರಿ ಹೂವಿನ ತೇರಿನ ಉತ್ಸವ ನೆರವೇರಿತು. ವರದಿ :- ಉಲ್ಲಾಸ್ ಕಜ್ಜೋಡಿ

ಸುಬ್ರಹ್ಮಣ್ಯ : ರಥಗಳಿಗೆ ಶಿಖರ ಮುಹೂರ್ತ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ಎಳೆಯುವ ಎರಡು ರಥಗಳಿಗೆ ಶಿಖರ ಮಹೂರ್ತ ಡಿ.07 ರ ಮಂಗಳವಾರ ನೆರವೇರಿಸಲಾಯಿತು. ದೇವಳದ ಪುರೋಹಿತ ಮಧುಸೂದನ ಕಲ್ಲೂರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಬಳಿಕ ಎರಡು ರಥಗಳಿಗೆ ಶಿಖರ ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್...

ಕರ್ಲಪ್ಪಾಡಿ: ಶ್ರೀ ಶಾಸ್ತ್ರಾವೇಶ್ವರ ದೇವಸ್ಥಾನದಲ್ಲಿ ಗೊನೆ ಮುಹೂರ್ತ

ಶ್ರೀ ಶಾಸ್ತ್ರಾವೇಶ್ವರ ದೇವಸ್ಥಾನ ಕರ್ಲಪ್ಪಾಡಿ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಕಾರ್ಯಕ್ರಮವು ಡಿ. 8 ರಂದು ಮುಂಜಾನೆ ಪೂಜೆಯ ಬಳಿಕ ನಡೆಯಿತು. ಈ ಸಂದರ್ಭ ದೇವಳದ ಆಡಳಿತಾಧಿಕಾರಿ ಶರತ್ ಕುಮಾರ್ ಎಸ್, ಉತ್ಸವ ಸಮಿತಿ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮೇನಾಲ , ಕಾರ್ಯದರ್ಶಿ ರೂಪಾನಂದ ಕರ್ಲಪ್ಪಾಡಿ , ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ...
error: Content is protected !!