Ad Widget

ಸುಬ್ರಹ್ಮಣ್ಯದಲ್ಲಿ ಯುವ ತೇಜಸ್ಸು ವತಿಯಿಂದ ಅಂಬ್ಯುಲೆನ್ಸ್ ಲೋಕಾರ್ಪಣೆ

ಸಮಾಜ ಸೇವೆಯ ಉದ್ದೇಶವಿಟ್ಟುಕೊಂಡು ಹುಟ್ಟಿಕೊಂಡ ಯುವ ತೇಜಸ್ಸು ವತಿಯಿಂದ ಸುಬ್ರಹ್ಮಣ್ಯದಲ್ಲಿ ಅಂಬ್ಯುಲೆನ್ಸ್ ಸೇವೆ ಡಿ.9 ರಂದು ಲೋಕಾರ್ಪಣೆಗೊಳ್ಳಲಿದೆ. ಯುವ ತೇಜಸ್ಸು ಬಳಗ ನೂರಾರು ಜನರ ನೋವಿಗೆ ಸ್ಪಂದಿಸಿ ಅನಾರೋಗ್ಯಕ್ಕೊಳಗಾದವರ ಚಿಕಿತ್ಸೆಗೆ ನೆರವಾಗುವ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಅಂಬ್ಯುಲೆನ್ಸ್ ಖರೀದಿಗೆ ಬೇಕಾದ ಧನ ಸಹಾಯ ಸಂಗ್ರಹವಾಗಲು ಜನತೆ ಕೈಜೋಡಿಸಿದ್ದು ಡಿ.9 ರಿಂದ ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ. ಈ ಮೂಲಕ ಸುಬ್ರಮಣ್ಯ ಭಾಗದ ಬಹುದಿನದ ಬೇಡಿಕೆ ಈಡೇರಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!