Ad Widget

ಸುಳ್ಯ :- ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನಕ್ಕೆ ಅಕ್ಕಿ ಹಾಗೂ ತರಕಾರಿ ಹಸ್ತಾಂತರ

ಸುಳ್ಯ ತಾಲೂಕಿನ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಡಿ.12 ರಿಂದ ಡಿ.26 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂದರ್ಭದಲ್ಲಿ ಭಕ್ತರಿಗೆ ನಿರಂತರ ಅನ್ನದಾನ ಇರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ವತಿಯಿಂದ ಚೆನ್ನಕೇಶವ ದೇವಸ್ಥಾನಕ್ಕೆ 40 ಕ್ವಿಂಟಾಲ್ ಅಕ್ಕಿ ಹಾಗೂ ತರಕಾರಿಗಳನ್ನು ಡಿ.18 ರಂದು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀ ಹರಪ್ರಸಾದ್ ತುದಿಯಡ್ಕ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಜಿಲ್ಲಾ ಜನಜಾಗೃತಿ ಅದ್ಯಕ್ಷ ರಾಮಚಂದ್ರ, ಪಿ.ಸಿ ಜಯರಾಮ್, ಭವಾನಿಶಂಕರ್ ಅಡ್ತಲೆ, ಮಹೇಶ್ ರೈ, ರಾಧಾಕೃಷ್ಣ, ಪದ್ಮನಾಭ ಶೆಟ್ಟಿ ಹಾಗೂ ತಾಲೂಕು ಮೇಲ್ವಿಚಾರಕ ನವೀನ್, ಕಛೇರಿ ಪ್ರಬಂಧಕ ಯತೀಶ್ ಹಾಗೂ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!