Ad Widget

ಜಯನಗರ : ಸ್ಮಶಾನ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡ ರೋಟರಿ ಕ್ಲಬ್ ಸುಳ್ಯ- ಸುಸಜ್ಜಿತ ಸ್ಮಶಾನ ರಚಿಸಿ ನಗರಾಡಳಿತಕ್ಕೆ ಹಸ್ತಾಂತರ : ಪ್ರಭಾಕರ ನಾಯರ್

ಶೋಚನೀಯ ಸ್ಥಿತಿಯಲ್ಲಿರುವ ಜಯನಗರದ ಸ್ಮಶಾನವನ್ನು ರೋಟರಿ ಕ್ಲಬ್ ವತಿಯಿಂದ ಅಭಿವೃದ್ಧಿ ಮಾಡಲು ನಿರ್ಧರಿಸಿದ್ದೇವೆ. ಈಗಾಗಲೇ ಆ ನಿಟ್ಟಿನಲ್ಲಿ ಕೆಲಸ ಸಾಗುತ್ತಿದ್ದು ರುದ್ರಭೂಮಿ ಛಾವಣಿ ಕೆಲಸ, ಸಿಲಿಕಾನ್ ಛೇಂಬರ್ ಅಳವಡಿಕೆ, ಶೌಚಾಲಯ, ಸ್ನಾನಗೃಹ, ಶಿವನ ಮೂರ್ತಿ ಹಾಗೂ ಪಾರ್ಕ್ ನಿರ್ಮಾಣ ಮಾಡಲು ನೀಲನಕ್ಷೆ ತಯಾರಿಸಿ ಕಾರ್ಯ ಆರಂಭಿಸಲಾಗಿದೆ ಎಂದು ರೋಟರಿ ಕ್ಲಬ್ ಸುಳ್ಯದ ಅಧ್ಯಕ್ಷ ಪ್ರಭಾಕರ ನಾಯರ್ ಅವರು ಹೇಳಿದರು.

ಡಿ.27 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಒಂದು ಮಹತ್ಕಾರ್ಯಕ್ಕೆ ಸಾರ್ವಜನಿಕರ ಸಹಕಾರ ಬೇಕು ಎಂದು ಅವರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಮಶಾನ ನಿರ್ವಹಣೆ ಸಮಿತಿ ಅಧ್ಯಕ್ಷ ಕಸ್ತೂರಿ ಶಂಕರ್, ಪ್ರಮುಖರಾದ ರಾಮಚಂದ್ರ.ಪಿ ಆನಂದ ಖಂಡಿಗೆ, ಪುರುಷೋತ್ತಮ ಕೆ.ಜಿ, ಬಿ.ಟಿ.ಮಾಧವ, ಪ್ರಸನ್ನ ಕಲ್ಲಾಜೆ, ಮಹಾಲಕ್ಷ್ಮಿ ಕೊರಂಬಡ್ಕ, ಹಾಗೂ ನ.ಪಂ. ಸದಸ್ಯೆ ಶಿಲ್ಪಾ ಸುದೇವ್ ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!