- Wednesday
- April 16th, 2025

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಅಂತಿಮ ಬಿ ಎಸ್ಸಿ ವಿದ್ಯಾರ್ಥಿನಿ ದೀಪಾಲಿ ಸಿ ಕೆ ಮಂಗಳೂರಿನ ನೆಹರೂ ಕೇಂದ್ರದವರು ನಡೆಸಿದ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು ಕುರಿತ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರಿನ...

ಚಿಗುರು ಯುವಕ ಮಂಡಲ ಪೆರಾಜೆ ಮತ್ತು ಜ್ಯೋತಿ ಪ್ರೌಢಶಾಲೆ ಪೆರಾಜೆ ಕೊಡಗು ಇವರ ಜಂಟಿ ಆಶ್ರಯದಲ್ಲಿ ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ 'ಮಧುಮೇಹ ಮತ್ತು ರಕ್ತದೊತ್ತಡ ಬರದಂತೆ ತಡೆಯುವ ಮಾರ್ಗಗಳು' ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವು ಡಿ.04ರಂದು ಜ್ಯೋತಿ ಪ್ರೌಢಶಾಲೆ ಪೆರಾಜೆ ಇಲ್ಲಿ ಜರುಗಿತು. ಕಾರ್ಯಕ್ರಮವನ್ನು ಎನ್.ಎ.ಜ್ಞಾನೇಶ್ ಅಧ್ಯಕ್ಷರು ಜ್ಯೋತಿ...

ಸುಳ್ಯ ತಾಲೂಕು ಅಕ್ಷರದಾಸೋಹ ಪ್ರಭಾರ ಸಹಾಯಕ ನಿರ್ದೇಶಕರಾಗಿ ಶ್ರೀಮತಿ ವೀಣಾ.ಎಂ.ಟಿ ನೇಮಕಗೊಂಡಿದ್ದಾರೆ. ಚಂದ್ರಶೇಖರ ಪೇರಾಲು ಇವರ ನಿವೃತ್ತಿಯಿಂದ ತೆರವಾಗಿರುವ ಈ ಸ್ಥಾನಕ್ಕೆ ಶ್ರೀಮತಿ ವೀಣಾ.ಎಂ.ಟಿ ನೇಮಕಗೊಂಡಿದ್ದು ಅಧಿಕಾರ ವಹಿಸಿಕೊಂಡಿದ್ದಾರೆ.ಇವರು ಸರಕಾರಿ ಪ್ರೌಢಶಾಲೆ ಮರ್ಕಂಜ ಇಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಂಡೆಕೋಲು ಗ್ರಾಮದ ಕುತ್ತಿಮುಂಡ ಕುಟುಂಬದ ಶಿವಾಜಿನಗರ ನಿವಾಸಿ ಮುತ್ತಪ್ಪ ಗೌಡ ಅವರು ನ.30ರಂದು ಮನೆಯಿಂದ ಕೆಲಸಕ್ಕೆಂದು ಹೊರಟವರು ಕಾಣೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 48 ವರ್ಷ ಪ್ರಾಯದ ಇವರು ಮಂಡೆಕೋಲಿನಿಂದ ಸುಳ್ಯಕ್ಕೆ ಬಂದು ಅಲ್ಲಿಂದ ಪುತ್ತೂರಿಗೆ ಸರಕಾರಿ ಬಸ್ ಮೂಲಕ ಪ್ರಯಾಣಿಸಿರುವ ಮಾಹಿತಿ ಇದ್ದು ಯಾರಿಗಾದರೂ ಕಂಡುಬಂದಲ್ಲಿ ಸುಳ್ಯ ಠಾಣೆಯನ್ನು...

ಬಾಳಿಲ ಪ್ರಾಥಮಿಕ ಶಾಲಾ ಭಜನಾ ತಂಡದಿಂದ ಕುಕ್ಕೆಸುಬ್ರಹ್ಮಣ್ಯದಲ್ಲಿ ಡಿ.03ರಂದು ನಡೆದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಕುಣಿತ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೆ.ಎಸ್.ಎಸ್ ಕಾಲೇಜು ಸುಬ್ರಹ್ಮಣ್ಯ, ಐಕ್ಯೂಎಸಿ ಹಾಗೂ ಕಾಮರ್ಸ್ ಮತ್ತು ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ನ.30 ರಂದು ಕಂದ್ರಪ್ಪಾಡಿಯ ಪ್ರೀತಮ್ ಮುಂಡೋಡಿ ಅವರ ಗದ್ದೆಯಲ್ಲಿ "ಭತ್ತ ಬೇಸಾಯ ರಕ್ಷಿಸುವಲ್ಲಿ ಯುವಜನರ ಪಾತ್ರ" ಎಂಬ ಕಾರ್ಯಕ್ರಮ ನಡೆಯಿತು.ಈ ಭತ್ತ ನಾಟಿಯ ಕಾರ್ಯಕ್ರಮದಲ್ಲಿ ಕಾಲೇಜಿನ ಅಂತಿಮ ವಾಣಿಜ್ಯ ಎ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಪ್ರೀತಮ್ ಮುಂಡೋಡಿ ಅವರ ಮನೆಯವರು ಈ ಕಾರ್ಯಕ್ರಮದಲ್ಲಿ...

ಟೆಂಪೋ ಟ್ರಾವೆಲರ್ ಹಾಗೂ ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಭೀಕರ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಡಿ.3 ರ ಮಧ್ಯರಾತ್ರಿ ನಡೆದಿದೆ. ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ ಕಾಲನಿ ನಿವಾಸಿ ಸೆಲ್ವ ಮೇಸ್ತ್ರಿ ಪುತ್ರ ವಿನೋದ್ ಕುಮಾರ್ (23) ಮೃತಪಟ್ಟ ಬೈಕ್ ಸವಾರ. ಸವಣೂರುನಿಂದ ವಿರಾಜಪೇಟೆ...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆಸುಬ್ರಹ್ಮಣ್ಯದ ವತಿಯಿಂದ ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಕಡಬ, ಇಚ್ಲಂಪಾಡಿ, ಗುಂಡ್ಯ, ಗುತ್ತಿಗಾರು ಮಾರ್ಗದಲ್ಲಿ ಬಸ್ಸಿನ ಸಮಸ್ಯೆ ಎದುರಾಗಿದ್ದು, ಈ ಭಾಗದಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದನ್ನು ಕೂಡಲೇ ಸರಿಪಡಿಸಿ ಈ ಮಾರ್ಗದಲ್ಲಿ ಬಸ್ ಒದಗಿಸುವಂತೆ ಪ್ರತಿಭಟನೆಯ ಮೂಲಕ ಒತ್ತಾಯಿಸಲಾಯಿತು. ಪ್ರತಿಭಟನೆಯ...

ಸುಳ್ಯ ತಾಲೂಕು ನೆಲ್ಲೂರು ಕೆಮ್ರಾಜೆ ಗ್ರಾಮದ ಕೊಟೆಲು ಅಡಿಕೆಹಿತ್ಲು ಎಂಬಲ್ಲಿ ಕಿಂಡಿ ಅಣೆಕಟ್ಟು ಮರದ ದಿಮ್ಮಿಗಳಿಂದ ತುಂಬಿದ್ದು, ನೀರು ಸರಿಯಾಗಿ ಹರಿಯುತ್ತಿರಲಿಲ್ಲ. ಇದನ್ನು ಮನಗಂಡ ದೊಡ್ಡತೋಟ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಡಿಸೆಂಬರ್ 02 ರಂದು ಈ ಅಣೆಕಟ್ಟಿನಲ್ಲಿ ಸಿಲುಕಿದ್ದ ಮರದ ದಿಮ್ಮಿಗಳನ್ನು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಸಮೀಪದ ಮನೆಯವರಾದ ಶಕುಂತಳಾ ಭಟ್ ಅಡಿಕೆಹಿತ್ಲು ಎಂಬುವವರು...

All posts loaded
No more posts