Ad Widget

ಐವರ್ನಾಡಿನಲ್ಲಿ ಕ್ಯಾಂಪ್ಕೋ ಸಂಸ್ಥೆಯ ಶಾಖೆ ತೆರೆದರೆ ರೈತರಿಗೆ ಪ್ರಯೋಜನ -ಎಸ್.ಎನ್.ಮನ್ಮಥ

ರೈತರಿಗೆ ಪ್ರಯೋಜನವಾಗುವ ರೀತಿಯಲ್ಲಿ ಕ್ಯಾಂಪ್ಕೋ ಸಂಸ್ಥೆಯ ಶಾಖೆಯನ್ನು ತೆರೆಯುವ ಬಗ್ಗೆ ಕೃಷಿಕರ ಸಭೆಯನ್ನು ಜ.1 ರಂದು ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ “ರೈತರು ಹಾಗೂ ಅಡಿಕೆ ಬೆಳೆಗಾರರ ಪರವಾಗಿ ಇರುವ ಕ್ಯಾಂಪ್ಕೋ ಸಂಸ್ಥೆಯ ಶಾಖೆಯನ್ನು ತೆರೆದರೆ ಇಲ್ಲಿಯ ಕೃಷಿಕರಿಗೆ ಪ್ರಯೋಜನವಾಗುತ್ತದೆ. ಈಗಾಗಲೇ ನಾವು ಇಲ್ಲಿ ಕೊಕ್ಕೋ ಖರೀದಿ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇದರೊಂದಿಗೆ ಅಡಿಕೆ, ಕಾಳುಮೆಣಸು ಕೂಡ ಖರೀದಿ ಮಾಡಿದರೆ ಗ್ರಾಮದ ಜನರಿಗೆ ಪ್ರಯೋಜನವಾಗುತ್ತದೆ” ಎಂದು ಹೇಳಿದರು.
ಸಭೆಯಲ್ಲಿ ಮಾಧವ ಭಟ್ ಶೃಂಗೇರಿ,ಶೇಖರ ಮಡ್ತಿಲ, ವಾಸುದೇವ ನಿಡುಬೆ, ಶಿವರಾಮ ನೆಕ್ರೆಪ್ಪಾಡಿ, ಸತೀಶ ಎಡಮಲೆ, ನವೀನ ಕುಮಾರ್ ಸಾರಕರೆ, ರವಿನಾಥ ಮಡ್ತಿಲ ಮತ್ತಿತರರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಸ್ವಾಗತಿಸಿ, ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!