Ad Widget

ಪ್ರಾಮಾಣಿಕತೆ ಮೆರೆದ ಬೆಳ್ಳಾರೆ ಲಕ್ಷ್ಮೀನಾರಾಯಣ ಭಟ್ – ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ವಾರಸುದಾರರಿಗೆ ಹಸ್ತಾಂತರ

ಹಣ ಹಾಗೂ ಅಮೂಲ್ಯ ದಾಖಲೆಗಳನ್ನು ಒಳಗೊಂಡ ಪರ್ಸ್ ಒಂದು ಪೆರುವಾಜೆಯಲ್ಲಿ ಲಕ್ಷ್ಮೀನಾರಾಯಣ ಭಟ್ ರವರಿಗೆ ಬಿದ್ದು ಸಿಕ್ಕಿತ್ತು. ತಕ್ಷಣ ಅವರು ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ಪರ್ಸ್ ಅನ್ನು ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

ಗುತ್ತಿಗಾರು : ಹೋಟೆಲ್ ಫನ್ ಟೈಮ್ & ಕ್ರೀಮ್ ಪಾರ್ಲರ್ ಶುಭಾರಂಭ

ಗುತ್ತಿಗಾರಿನ ಭಾರತ್ ಪೆಟ್ರೋಲ್ ಪಂಪ್ ಮುಂಭಾಗ ಅರುಣೋದಯ ಗ್ರೂಪ್ಸ್ ನ ಸಹಸಂಸ್ಥೆಯಾದ ಹೋಟೆಲ್ ಫನ್ ಟೈಮ್ ಜ. 8 ರಂದು ಶುಭಾರಂಭಗೊಂಡಿತು. ಇಲ್ಲಿ ಚಿಕನ್ ಟಿಕ್ಕ, ಅಲ್ ಫಹಾಮ್, ರೋಟಿ, ಶವರ್ಮ, ಚೈನೀಸ್, ಬಿರಿಯಾನಿ, ತಂದೂರಿ ಚಿಕನ್, ಊಟ, ವಿವಿಧ ಬಗೆಯ ಜ್ಯೂಸ್ ಹಾಗೂ ಐಸ್ ಕ್ರೀಂ ದೊರೆಯತ್ತದೆ ಎಂದು ಮಾಲಕರು ತಿಳಿಸಿದ್ದಾರೆ.
Ad Widget

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ದಿನಾಂಕ 16-12-2021 ರಿಂದ ದಿನಾಂಕ 14-01-2022 ರವರೆಗೆ ದಿನನಿತ್ಯ ಪ್ರಾತಃಕಾಲ 5:00 ಗಂಟೆಗೆ ಧನುಪೂಜೆ ನಡೆಯಿತು. ದಿನಾಂಕ 14-01-2022 ರಂದು ಪ್ರಾತಃಕಾಲ 4:00 ಗಂಟೆಯಿಂದ ಉಧ್ಯಾಪನ ಧನುಪೂಜೆ ಹಾಗೂ ಮದ್ಯಾಹ್ನ ವನಶಾಸ್ತವೇಶ್ವರನ ವಾರ್ಷಿಕ ಪೂಜೆ ಹಾಗೂ ವನಭೋಜನ ನಡೆಯಿತು.ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ...

ಸಾಂಸ್ಕೃತಿಕ ರಂಗಕ್ಕೆ ರಂಗಮನೆಯ ಕೊಡುಗೆ ಅಪಾರ : ಕಲಾವತಿ ವೆಂಕಟಕೃಷ್ಣಯ್ಯ

'ಯಕ್ಷಗಾನ,ರಂಗಭೂಮಿ,ನೃತ್ಯ,ಸಂಗೀತ,ಜಾದೂ,ಮಕ್ಕಳ ಶಿಬಿರ,ಚಿತ್ರಕಲೆ ಹೀಗೆ ಪ್ರತಿಯೊಂದು ಕಲೆಗೂ ವೇದಿಕೆ ನೀಡುತ್ತಿರುವ ರಂಗಮನೆಯು ಸಾಂಸ್ಕೃತಿಕವಾಗಿ ಬಹಳ ದೊಡ್ಡ ಕೊಡುಗೆ ನೀಡಿದ ಸಂಸ್ಥೆಯಾಗಿದೆ. ನಮ್ಮೆಲ್ಲರ ಸಹಕಾರ ಈ ಸಂಸ್ಥೆಗೆ ಬಹು ಮುಖ್ಯವಾಗಿದೆ ಎಂದು ಹಿರಿಯ ಕಲಾ ಪೋಷಕಿ ಶ್ರೀಮತಿ ಕಲಾವತಿ ವೆಂಕಟಕೃಷ್ಣಯ್ಯ ಹೇಳಿದರು.ಅವರು ಸುಳ್ಯ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ ಶಾಸ್ತ್ರೀಯ ಸಂಗೀತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.      ಮಹಾಬಲ-...

ಬಳ್ಪ : ಧರ್ಮ ಶಾಸ್ತವು ಭಜನಾ ಮಂದಿರಕ್ಕೆ ಕೊಡುಗೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಬಳ್ಪ ವಲಯ ಇದರ ವತಿಯಿಂದ ಶ್ರೀ ಧರ್ಮ ಶಾಸ್ತವು ಭಜನಾ ಮಂದಿರಕ್ಕೆ ಕಸದ ತೊಟ್ಟಿಯನ್ನು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನೇತ್ರಾವತಿ ಹೊಪ್ಪಾಳೆ ವಿತರಿಸಿದರು.ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷರಾದ ಸುರೇಶ್ ಆಲ್ಕಬೆ,ಕಾರ್ಯದರ್ಶಿ ಮಿಥುನ್ ರಾಜ್ ಜತ್ತಿಲ,ಶ್ರೀ ಕ್ಷೇತ್ರ ಧ.ಗ್ರಾ.ಯೋ.ಶ್ರೀಮತಿ ಭವ್ಯ ಮತ್ತು ಭಜನಾ ಮಂದಿರದ ಪೂರ್ವಾಧ್ಯಕ್ಷರುಗಳು,ಸದಸ್ಯರು...

ಕೃಷಿಕರು ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು : ಕೆ.ಜಿ.ಬೋಪಯ್ಯ

ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಂಸ್ಥೆಯ ನೂತನ ಅತ್ಯಾಧುನಿಕ ಮಣ್ಣು ಪರೀಕ್ಷಾ ಘಟಕವನ್ನು ಜ.14 ರಂದು ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯರವರು ಪ್ರಸಕ್ತ ನಮ್ಮ ಕೃಷಿಕರು ತಮ್ಮ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಮಣ್ಣು ಪರೀಕ್ಷೆ ಮಾಡಿ ಪೂರಕ ಸಾವಯವ ಗೊಬ್ಬರ ಬಳಕೆಯಂತಹ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆ...

ಮೊಗ್ರ ದೈವಸ್ಥಾನದಲ್ಲಿ ಗೊನೆ ಮುಹೂರ್ತ – ಜ.19 – 25 ಜಾತ್ರೋತ್ಸವ

ಮೊಗ್ರ ಶ್ರೀ ಕನ್ನಡ ದೇವತೆಯಾನೆ ಪುರುಷ ದೈವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಜ.19 ರಿಂದ ಜ.25 ರವರೆಗೆ ನಡೆಯಲಿದೆ. ಆ ಪ್ರಯುಕ್ತ ಗೊನೆ ಮುಹೂರ್ತ ಕಾರ್ಯಕ್ರಮ ಜ.15 ರಂದು ನಡೆಯಿತು. ಈ ಸಂದರ್ಭದಲ್ಲಿ ಮೊಗ್ರ ವೆಂಕಟ್ರಮಣ ಭಟ್, ಕಾರ್ಯಪ್ಪ ಗೌಡ ಚಿಕ್ಮುಳಿ, ಉಮೇಶ್ ಮಕ್ಕಿ ,ಚೆನ್ನಕೇಶವ ಕಮಿಲ, ದೊಡ್ಡಣ್ಣ ಗೌಡ ಚಿಕ್ಮುಳಿ,ಸೀತಾರಾಮ ಗೌಡ ಚಿಕ್ಮುಳಿ, ರಾಮಕೃಷ್ಣ ಗೌಡ...

ಕುಲ್ಕುಂದ : ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಧನುಪೂಜೆ ಸಂಪನ್ನ

ಕುಲ್ಕುಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಜ.15 ರಂದು ಪ್ರಾತಃಕಾಲ 4:30 ಕ್ಕೆ ಭಕ್ತರ ಸಮ್ಮುಖದಲ್ಲಿ ಶ್ರೀ ಶಾಸ್ತವೇಶ್ವರ ಸನ್ನಿಧಾನದಲ್ಲಿ ಧನುಪೂಜೆ ಸಂಪನ್ನಗೊಂಡಿತು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ದೇವಸ್ಥಾನದ ಅರ್ಚಕರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ
error: Content is protected !!