ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಜ.30 ಆದಿತ್ಯವಾರದಂದು ಜರುಗಲಿದೆ. ಜಾತ್ರೋತ್ಸವದ ಅಂಗವಾಗಿ ಪೂರ್ವಾಹ್ನ ಗಂಟೆ 8.00ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಲಿದೆ. ಮಧ್ಯಾಹ್ನ ಗಂಟೆ 12.30ಕ್ಕೆ ಮಹಾಪೂಜೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ರಿಂದ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಗಂಟೆ 6.30ರಿಂದ ರಂಗಪೂಜೆ, ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಂತ್ರಾಕ್ಷತೆ ನಡೆದು ಬಳಿಕ ಗುಳಿಗ, ಪಂಜುರ್ಲಿ, ಶಿರಾಡಿ ದೈವಗಳ ನೇಮ ನಡಾವಳಿ ಜರುಗಲಿದೆ. ಈ ಎಲ್ಲಾ ದೇವತಾ ಕಾರ್ಯಗಳಲ್ಲಿ ಭಕ್ತಾಭಿಮಾನಿಗಳು ಭಾಗಿಗಳಾಗಿ ಶ್ರೀ ದೇವರ ಗಂಧಪ್ರಸಾದ ಸ್ವೀಕರಿಸಿ, ಶ್ರೀ ವಿಷ್ಣುಮೂರ್ತಿ ದೇವರ ಕೃಪೆಗೆ ಪಾತ್ರರಾಗುವಂತೆ ಆಡಳಿತ ಮೊಕ್ತೇಸರರಾದ ಎಂ.ಕೆ. ಬಾಲಚಂದ್ರ ರಾವ್ ವಿನಂತಿಸಿದ್ದಾರೆ.
- Saturday
- September 21st, 2024