Ad Widget

ಸುಳ್ಯ : ನ.ಪಂ.ನಾಮನಿರ್ದೇಶನ ಸದಸ್ಯರಾಗಿ ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ, ಯತೀಶ್ ಬೀರಮಂಗಲ ನೇಮಕ

ಸುಳ್ಯ ನಗರ ಪಂಚಾಯತ್‌ಗೆ 3 ಮಂದಿ ನಾಮನಿರ್ದೇಶನ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶ ನೀಡಿದೆ. ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ, ಯತೀಶ್ ಬೀರಮಂಗಲ ಅವರನ್ನು ನಗರ ಪಂಚಾಯತ್ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ನಗರ ಪಂಚಾಯತ್ ಚುನಾವಣೆಯಲ್ಲಿ ಬೂಡು ರಾಧಾಕೃಷ್ಣ ರೈ, ರೋಹಿತ್ ಕೊಯಿಂಗೋಡಿ ಮತ್ತು ಯತೀಶ್ ಬೀರಮಂಗಲ ಅವರು ಸ್ಪರ್ಧಿಸಿದ್ದರು.

ಸುಳ್ಯ : ಅಡಿಕೆ ಖರೀದಿಸಿ ಚೆಕ್ ನೀಡಿ ವಂಚಿಸಿದ ಆರೋಪಿಗೆ ಶಿಕ್ಷೆ

ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಲಯ ಶಿಕ್ಷೆ ನೀಡಿ ಆದೇಶಿಸಿದೆ. ದುಗಲಡ್ಕ ನಿವಾಸಿ ಸುಳ್ಯದ ಮರದ ವ್ಯಾಪಾರಿ ಮಹಮ್ಮದ್ ಅಶ್ರಫ್ ಎಂಬವರು ದಿನಾಂಕ 01/01/2019 ರಂದು ನೆಲ್ಲೂರು ಕೆಮ್ರಾಜೆ ಗ್ರಾಮದ ಜಬಳೆ ಸೋಮಶೇಖರ್‌ ನಾಯಕ್ ಎಂಬವರ ಮನೆಗೆ ಪಿಕಪ್ ವಾಹನದಲ್ಲಿ ಧಾವಿಸಿ, ಸುಲಿದು...
Ad Widget

ಬಸ್ ನಿಲ್ದಾಣದಲ್ಲಿ ಮುರಿದು ಬಿದ್ದಿದ್ದ ಚಯರ್ ದುರಸ್ತಿ

ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಹಾಕಿರುವ ಹಲವು ಚಯರ್ ಗಳು ಮುರಿದು ಬಿದ್ದು ಕಬ್ಬಿಣದ ರಾಡ್ ಮಾತ್ರ ಉಳಿದುಕೊಂಡಿತ್ತು. ಇದರಿಂದ ಪ್ರಯಾಣಿಕರು ಸಂಕಟ ಅನುಭವಿಸುತ್ತಿರುವ ಬಗ್ಗೆ ಅಮರ ಸುದ್ದಿ ವೆಬ್ಸೈಟ್ ನಲ್ಲಿ ಫೆ. 14 ರಂದು ವರದಿ ಪ್ರಕಟಿಸಿ ಅಧಿಕಾರಿಗಳನ್ನು ಎಚ್ಚರಿಸಿತ್ತು.ವಾರದೊಳಗೆ ಸರಿಪಡಿಸುವ ಭರವಸೆ ನೀಡಿದ್ದ ಅಧಿಕಾರಿಗಳು ಫೆ.17 ರಂದು ಚಯರ್ ದುರಸ್ತಿ...

ಸುಬ್ರಹ್ಮಣ್ಯ : ವೆಂಕಟರಮಣ ಸೊಸೈಟಿಯ ಶಾಖೆ ಕಾರ್ಯಾರಂಭ – ಡಾ.ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಉದ್ಘಾಟನೆ

(ಚಿತ್ರ : ಶಾಂತಾಲ ಸುಬ್ರಹ್ಮಣ್ಯ) ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುಬ್ರಹ್ಮಣ್ಯ ಶಾಖೆಯ ಉದ್ಘಾಟನೆಯು ಫೆ. 17 ರಂದು ಶ್ರೀಕೃಪಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಗೊಂಡಿತು. ಶಾಖೆಯ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್...

ಶ್ರದ್ಧಾ-ಭಕ್ತಿಯ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ಜಾತ್ರೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.12ರಿಂದ ಫೆ.16ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಫೆ.12ರಂದು ಬೆಳಗ್ಗೆ ಉಗ್ರಾಣ ಮುಹೂರ್ತ ನಡೆದು ಸಂಜೆ ತಂತ್ರಿಗಳ ಆಗಮನ, ಸ್ವಾಗತ, ಪ್ರಾರ್ಥನೆ, ದೀಪಾರಾಧನೆ, ರಾತ್ರಿ ಧ್ವಜಾರೋಹಣ ನಡೆಯಿತು. ಬಳಿಕ...
error: Content is protected !!