Ad Widget

ಸುಬ್ರಹ್ಮಣ್ಯ : ವೆಂಕಟರಮಣ ಸೊಸೈಟಿಯ ಶಾಖೆ ಕಾರ್ಯಾರಂಭ – ಡಾ.ರೇಣುಕಾಪ್ರಸಾದ್ ಕೆ.ವಿ. ದೀಪ ಬೆಳಗಿಸಿ ಉದ್ಘಾಟನೆ

(ಚಿತ್ರ : ಶಾಂತಾಲ ಸುಬ್ರಹ್ಮಣ್ಯ)

ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸುಬ್ರಹ್ಮಣ್ಯ ಶಾಖೆಯ ಉದ್ಘಾಟನೆಯು ಫೆ. 17 ರಂದು ಶ್ರೀಕೃಪಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾರಂಭಗೊಂಡಿತು. ಶಾಖೆಯ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷರು ಹಾಗೂ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ.ಯವರು ನೆರವೇರಿಸಿ ಶುಭಹಾರೈಸಿದರು.

ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ. ಸಿ. ಜಯರಾಮ ವಹಿಸಲಿದ್ದರು. ಗಣಕೀಕರಣದ ಉದ್ಘಾಟನೆಯನ್ನು ಮಾಜಿ ಜಿ ಪಂ ಸದಸ್ಯೆ ಆಶಾ ತಿಮ್ಮಪ್ಪ ನೆರವೇರಿಸಿದರು. ಭದ್ರತಾ ಕೊಠಡಿಯನ್ನು ವಿಶ್ರಾಂತ ಪ್ರಾಂಶುಪಾಲ ಹಾಗೂ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ ಆರ್ ಶೆಟ್ಟಿಗಾರ್ ಉದ್ಘಾಟಿಸಿದರು.ಪ್ರಥಮ ಠೇವಣಿ ಪತ್ರವನ್ನು ಐನೆಕಿದು ಸುಬ್ರಹ್ಮಣ್ಯ ವ್ಯವಸಾಯಿಕ ಸೇವಾ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಕೂಜುಗೋಡು, ಪ್ರಥಮ ಪಾಲು ಪತ್ರ ವಿತರಣೆಯನ್ನು ಸುಳ್ಯ ತಾಲ್ಲೂಕು ಮಹಿಳಾ ವಿವಿದೋದ್ದೇಶ ಸಹಕಾರ ಸಂಘ ಸುಬ್ರಹ್ಮಣ್ಯ ಇದರ ಅಧ್ಯಕ್ಷೆ ರಾಜೀವಿ ಆರ್ ರೈ, ಪ್ರಥಮ ಸಾಲಪತ್ರದ ಮಂಜೂರಾತಿಯನ್ನು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಶೋಕ್ ನೆಕ್ರಾಜೆ ವಿತರಿಸಿದರು. ಪ್ರಥಮ ಉಳಿತಾಯ ಖಾತೆ ಪುಸ್ತಕ ವಿತರಣೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಗುಂಡಡ್ಕ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಅಧ್ಯಾಪಕ ಹಾಗೂ ಶ್ರೀಕೃಪಾ ಕಾಂಪ್ಲೆಕ್ಸ್ ಮಾಲಕ ಸಿ. ದೊಡ್ಡಣ್ಣಗೌಡ, ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಭರತ್ ನೆಕ್ರಾಜೆ ಉದ್ಯಮಿ ಹಾಗೂ ಕಲಾವಿದ ಯಜ್ನೇಶ್ ಆಚಾರ್ಯ, ಸುಬ್ರಹ್ಮಣ್ಯ ಕುಮಾರಸ್ವಾಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಗಣೇಶ್ ನಾಯರ್, ಶುಭಕರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ದಿನೇಶ್ ಬಿ. ಎನ್., ಸೊಸೈಟಿ ಉಪಾಧ್ಯಕ್ಷ ಮೋಹನ್ ರಾಂ ಸುಳ್ಳಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಟಿ. ವಿಶ್ವನಾಥ, ನಿರ್ದೇಶಕರಾದ ಚಂದ್ರಾ ಕೋಲ್ಚಾರ್, ಕೆ.ಸಿ. ಸದಾನಂದ, ಪಿ.ಎಸ್. ಗಂಗಾಧರ, ದಾಮೋದರ ಎನ್.ಎಸ್., ಹೇಮಚಂದ್ರ ಐ.ಕೆ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!