Ad Widget

ಮಾ.05: ಮೂಲೆಮಜಲು ದೋಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ

ಮುಪ್ಪೇರ್ಯ ಗ್ರಾಮದ ಮೂಲೆಮಜಲು ದೋಳ ಗರಡಿಯಲ್ಲಿ ಕಾಲಾವಧಿ ನಡೆಯುವ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವವು ಮಾ.05ರಂದು ನಡೆಯಲಿದೆ. ನೇಮೋತ್ಸವದ ಅಂಗವಾಗಿ ಮಾ.04ರಂದು ಪೂರ್ವಾಹ್ನ ಗಂಟೆ 10.00ಕ್ಕೆ ನಾಗತಂಬಿಲ ಹಾಗೂ ರಕ್ತೇಶ್ವರಿ ದೈವದ ತಂಬಿಲ ನಡೆಯಲಿದೆ. ರಾತ್ರಿ ಗಂಟೆ 9.00ಕ್ಕೆ ಪಾಷಾಣಮೂರ್ತಿ ಹಾಗೂ ಕೊಡಮಣಿತ್ತಾಯ ದೈವದ ನೇಮ ನಡೆಯಲಿದೆ. ಮಾ.05ರಂದು ಪೂರ್ವಾಹ್ನ ಗಂಟೆ 10.00ಕ್ಕೆ ಬ್ರಹ್ಮರ ಉತ್ಸವ, ಸಂಜೆ...

ಬಂದಡ್ಕ : ಪಾಲಾರ್ ಮಲ್ಟಿ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಶುಭಾರಂಭ

ಡಾ| ಶರಣ್ಯ ಅಖಿಲೇಶ್ ಭಟ್ ಪಾಲಾರ್ ಮಾಲಕತ್ವದ ನೂತನ ಡೆಂಟಲ್ ಕ್ಲಿನಿಕ್ ಬಂದಡ್ಕದ ಜಬಲ್ ನೂರ್ ಕಾಂಪ್ಲೆಕ್ಸ್ ನಲ್ಲಿ ಫೆ.14 ರಂದು ಶ್ರೀ ಗಣಪತಿ ಹವನ ಹಾಗೂ ಶ್ರೀ ಧನಲಕ್ಷ್ಮಿ ಪೂಜಾ ವಿಧಿಯೊಂದಿಗೆ ಶುಭಾರಂಭಗೊಂಡಿತು. ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಡಾ| ಮುರಳಿ ಮೋಹನ್ ಚೂಂತಾರು ಮಾತನಾಡಿ ವೈದ್ಯರುಗಳಿಗೆ ಕೇವಲ ನೋವನ್ನು ಶಮನ...
Ad Widget

ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಶಿಕ್ಷಕ ಗುರುರಾಜ್ ನ್ಯಾಯಾಲಯಕ್ಕೆ ಶರಣು

ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಲ್ಲಿ ನ್ಯಾಯಾಲಯದಿಂದ ಬಂಧನ ವಾರೆಂಟ್ ಗೊಳಗಾಗಿ ತಲೆಮರೆಸಿಕೊಂಡಿದ್ದ ಸುಬ್ರಹ್ಮಣ್ಯದ ಎಸ್ ಎಸ್ ಪಿ ಯು ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಗುರುರಾಜ್ ಇಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪಕ್ಕೊಳಗಾಗಿ ಬಂಧನಕ್ಕೊಳಗಾಗಿದ್ದು, ಒಂದೇ ದಿನದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಅದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯ ಮನೆಯವರು ಹೈಕೋರ್ಟ್ ಮೊರೆ ಹೋಗಿ ಆರೋಪಿಯ...

ಶುಭವಿವಾಹ: ಮುರಳಿಕೃಷ್ಣ-ಸತ್ಯವತಿ(ಸರಿತಾ)

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಶ್ರೀಮತಿ ಸಾವಿತ್ರಿ ಮತ್ತು ಶ್ರೀ ಮೋಹನಕುಮಾರ ಗೌಡರ ಸುಪುತ್ರ ಚಿ|ರಾ|ಮುರಳಿಕೃಷ್ಣ ಅವರ ವಿವಾಹವು ಕಡಬ ತಾಲೂಕು ಎಡಮಂಗಲ ಗ್ರಾಮದ ನಾಗನಕಜೆ ಶ್ರೀಮತಿ ಉಮಾವತಿ ಮತ್ತು ಶ್ರೀ ನಾರ್ಣಪ್ಪ ಗೌಡರ ಸುಪುತ್ರಿ ಚಿ|ಸೌ|ಸತ್ಯವತಿ(ಸರಿತಾ) ರೊಂದಿಗೆ ಫೆ.21ರಂದು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಹರಿಹರ ಪಲ್ಲತ್ತಡ್ಕ :- ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಚಾಲನೆ

ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಪ್ರಾರಂಭವಾಗಿದ್ದು,ಫೆ.20 ರಂದು ಬೆಳಿಗ್ಗೆ 9:00 ಗಂಟೆಯಿಂದ ಹಸಿರು ಕಾಣಿಕೆ ಮೆರವಣಿಗೆ ನಡೆಯಿತು. ಮದ್ಯಾಹ್ನ 12:00 ಗಂಟೆಗೆ ಮಹಾಪೂಜೆ, ಮದ್ಯಾಹ್ನ 12:30 ರಿಂದ ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ರಾತ್ರಿ 8:00 ಗಂಟೆಗೆ ಮಹಾಪೂಜೆ, ರಾತ್ರಿ 8:15 ರಿಂದ ಅನ್ನಸಂತರ್ಪಣೆ...

ವಿಷ ಸೇವಿಸಿದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಸಾವು

ಪುತ್ತೂರು ವಿವೇಕಾನಂದ ಕಾಲೇಜಿನ ಪಿಯುಸಿ ವಿದ್ಯಾರ್ಥಿಯಾಗಿರುವ ಶ್ರಾವ್ಯ ಬೇರಿಕೆ ವಾರದ ಹಿಂದೆ ಮನೆಗೆ ಬಂದಿದ್ದಾಗ ಇಲಿ ಪಾಷಣ ಸೇವಿಸಿ ಅನಾರೋಗ್ಯಕ್ಕೊಳಗಾಗಿದ್ದರು. ಮನೆಯವರಿಗೆ ಗೊತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೇ ಫೆ. 20 ರಂದು ನಿಧನರಾದರು.ಈಕೆ ಮರ್ಕಂಜ ಗ್ರಾಮದ ಹೈದಂಗೂರು ಬೇರಿಕೆ ರಮೇಶ್ ಭಟ್ ರವರ ಪುತ್ರಿ.ಅನಾರೋಗ್ಯ ಕಾರಣಗಳಿಂದ ವಿಧ್ಯಾಭ್ಯಾಸ ಮಾಡಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ವಿಷ...
error: Content is protected !!