Ad Widget

ಮುಕ್ಕೂರು: ಕ್ರಿಕೆಟ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಕ್ಕೂರು ಶಾಲಾ ವಠಾರದಲ್ಲಿ ಕ್ರಿಕೆಟ್ ಪಂದ್ಯಕೂಟ ಮತ್ತು ದೇವದಾಸ್ ಕಾಪಿಕಾಡ್ ಮತ್ತು ಭೋಜರಾಜ್ ವಾಮಂಜೂರ್ ಅಭಿನಯಿಸಿರುವ “ಕೊಡೆ ಬುಡ್ಪಾಲೆ” ತುಳು ಹಾಸ್ಯಮಯ ನಾಟಕ ಕಾರ್ಯಕ್ರಮವು ಮಾ.27ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಇಂದು(ಮಾ.13) ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆಯನ್ನು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮತ್ತು ಕುಂಡಡ್ಕ ಕೊರಗಜ್ಜ ದೈವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಪೆರುವೋಡಿ ದೇವಸ್ಥಾನದಲ್ಲಿ ದೇವಸ್ಥಾನದ ಅರ್ಚಕರಾದ ಸುರೇಶ್ ಉಪಾಧ್ಯಾಯ ಬಿಡುಗಡೆಗೊಳಿಸಿದರು. ಕೊರಗಜ್ಜ ದೈವಸ್ಥಾನದಲ್ಲಿ ಕುಂಬ್ರ ದಯಾಕರ ಆಳ್ವ ಪೆರುವಾಜೆ ಇವರು ಬಿಡುಗಡೆಗೊಳಿಸಿದರು.


ಮಾ.27 ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ, ಸಹಜ್ ರೈ ಬಳಜ್ಜ ಉಪಾಧ್ಯಕ್ಷರು, ಯುವಮೋರ್ಚಾ ಬಿ ಜೆ ಪಿ ದಕ್ಷಿಣ ಕನ್ನಡ, ದಿನೇಶ್ ಮೆದು ಅಧ್ಯಕ್ಷರು ಎ ಪಿ ಎಂ ಸಿ ಪುತ್ತೂರು, ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರು ಗಣೇಶೋತ್ಸವ ಸಮಿತಿ ಪುತ್ತೂರು ಮತ್ತು ಗಣ್ಯಾತಿಗಣ್ಯರು ಈ ಕಾರ್ಯಕ್ರಮಕ್ಕೆ ಆಗಮನಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಶ್ರೀ ಸುದಾನಂದ ಮಣಿಯಾಣಿ ಪೆರುವಾಜೆ ಹಾಗೂ ಜಿಲ್ಲಾ ರೈತ ಸಾಧಕ ಪ್ರಶಸ್ತಿ ಪುರಸ್ಕೃತೆ ಶ್ರೀಮತಿ ಶ್ವೇತಾ ನರಸಿಂಹ ತೇಜಸ್ವಿ ಕಾನಾವು ಇವರಿಗೆ ಗೌರವಾರ್ಪಣೆ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!