Ad Widget

ಸಹಕಾರಿ ಧುರೀಣ ಸೀತಾರಾಮ ರೈ ಸವಣೂರು ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಹಿರಿಯ ಸಹಕಾರಿ ಧುರೀಣ ಹಾಗೂ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಕೆ. ಸೀತಾರಾಮ ರೈ ಸವಣೂರು ಇವರಿಗೆ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿ ಲಭಿಸಿದೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾ.20 ರಂದು ಬೆಂಗಳೂರಿನ ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡುವರು. ಕೆ.ಸೀತಾರಾಮ ರೈಯವರು ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಸೊಸೈಟಿ ಸೂಪರ್ ವೈಸರ್ ಆಗಿ ಹಲವು ವರ್ಷ ಕಾರ್ಯನಿರ್ವಹಿಸಿ ಬಳಿಕ ಅದಕ್ಕೆ ರಾಜೀನಾಮೆ ನೀಡಿ ಉದ್ಯಮ ಕ್ಷೇತ್ರದಲ್ಲಿ ಮುಂದುವರಿದಿದ್ದರು. ಆ ಬಳಿಕ ಸವಣೂರಿನಲ್ಲಿ ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಿ ಸವಣೂರನ್ನು ವಿದ್ಯಾ ಕ್ಷೇತ್ರವನ್ನಾಗಿ ಪರಿವರ್ತಿಸಿದ್ದರು. ತನ್ನ ಅಧ್ಯಕ್ಷತೆಯ ಆದರ್ಶ ವಿವಿದೋದ್ಧೇಶ ಸಹಕಾರಿ ಸಂಸ್ಥೆಯನ್ನು ಸ್ಥಾಪಿಸಿ ಅದರ ಹತ್ತಾರು ಶಾಖೆಗಳನ್ನು ವಿಸ್ತರಿಸಿದ್ದಾರೆ. ಕೆ.ಎಂ.ಎಫ್. ನಿರ್ದೇಶಕರಾಗಿ ಹಲವು ವರ್ಷ ಕಾರ್ಯನಿರ್ವಹಿಸಿದ್ದರು. ಜತೆಗೆ ಸಮಾಜ ಸೇವೆ ಮಾಡುವ ಉದ್ದೇಶದಿಂದ ರೋಟರಿ ಕ್ಲಬ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿ ದುಡಿಯುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading