Ad Widget

ಗುತ್ತಿಗಾರು : ಪ್ರಸಾದ್ ರೆಸ್ಟೋರೆಂಟ್ & ಲಾಡ್ಜಿಂಗ್ ಶುಭಾರಂಭ – ಸಚಿವ ಎಸ್. ಅಂಗಾರರಿಂದ ಉದ್ಘಾಟನೆ

ಗುತ್ತಿಗಾರಿನ ಹೃದಯಭಾಗದಲ್ಲಿರುವ ದೇವಿಪ್ರಸಾದ್ ಚಿಕ್ಮುಳಿ ಮಾಲಕತ್ವದ ದೇವಿಸಿಟಿ ಕಾಂಪ್ಲೆಕ್ಸ್ ನಲ್ಲಿ ಪ್ರಸಾದ್ ರೆಸ್ಟೋರೆಂಟ್ ಮತ್ತು ಲಾಡ್ಜಿಂಗ್ ಮಾ.20 ರಂದು ಶುಭಾರಂಭಗೊಂಡಿತು. ಮೀನುಗಾರಿಕೆ ಹಾಗೂ ಬಂದರು ಇಲಾಖೆಯ ಸಚಿವರಾದ ಎಸ್.ಅಂಗಾರ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ ಕಡ್ತಲ್ ಕಜೆ, ಗುತ್ತಿಗಾರು ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಗುತ್ತಿಗಾರು ಮುತ್ತಪ್ಪೇಶ್ವರ ದೇವಸ್ಥಾನದ ಮೋಕ್ತೆಸರರಾದ ವೆಂಕಟ್ ವಳಲಂಬೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮುಳಿಯ ಕೇಶವ ಭಟ್, ವರ್ತಕರ ಸಂಘದ ಅಧ್ಯಕ್ಷರಾದ ಶಿವರಾಮ ಕರುವಾಜೆ, ಮಣಿಕುಮಾರ್ ಮುಂಡೋಡಿ, ದೊಡ್ಡಣ್ಣ ಗೌಡ ಚಿಕ್ಮುಳಿ, ಬಾಲಕೃಷ್ಣ ಚಿಕ್ಮುಳಿ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!