Ad Widget

ಮುರುಳ್ಯ – ಎಣ್ಮೂರು ಸಹಕಾರಿ ಸಂಘದ ಹೊಸ ಕಟ್ಟಡಕ್ಕಾಗಿ ತಂದಿಟ್ಟಿದ್ದ ರೂ1.52 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ಸ್ ಸಾಧನ ಕಳವು

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮುರುಳ್ಯ – ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ.

ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಲೆಕ್ಕಾಡಿ ಕಟ್ಟಡದಲ್ಲಿ ತಂದಿಟ್ಟಿದ್ದ ಮಾನಿಟರ್-2, ಕಂಪ್ಯೂಟರ್-1 ಸೇರಿದಂತೆ ಎಲ್.ಇ.ಡಿ ಸ್ಮಾರ್ಟ್ ಟಿವಿಗಳು ಸೇರಿದಂತೆ 1.52 ಲಕ್ಷ ರೂಪಾಯಿ ಮೌಲ್ಯದ ವಸ್ತುವನ್ನು ಮಾ.18 ರಿಂದ ನಿನ್ನೆಯ ನಡುವಿನ ಅವಧಿಯಲ್ಲಿ ಯಾರೋ ದರೋಡೆ ಮಾಡಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಮುರುಳ್ಯ -ಎಣ್ಮೂರು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್ ದೂರು ನೀಡಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮಾ.30 ಪ್ರಕರಣ ದಾಖಲಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!