Ad Widget

ದಸರಾ ಕಾವ್ಯ ಪ್ರಶಸ್ತಿಗೆ ಭಾಜನರಾದ ಲೀಲಾಕುಮಾರಿ ತೊಡಿಕಾನ

ಅಖಿಲ ಭಾರತೀಯ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪರಿಷತ್ ಮತ್ತು ಪ್ರಗತಿಶೀಲ ಪ್ರಕಾಶನವು ಮೈಸೂರು ದಸರಾದ ಅಂಗವಾಗಿ ನಡೆಸಿದ ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ಲೀಲಾಕುಮಾರಿ ತೊಡಿಕಾನರ ಕವನವು ಅತ್ಯುತ್ತಮ ಕವನವೆಂದು ಆಯ್ಕೆಯಾಗಿದ್ದು, ದಸರಾ ಕಾವ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಎ. ೧೭ರಂದು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದಸರ ಕಾವ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.ನಂತರ ನಡೆದ ಕವಿಗೋಷ್ಟಿಯಲ್ಲಿ ವಿಜೇತ ಕವನವನ್ನು ಲೀಲಾಕುಮಾರಿಯವರು ವಾಚಿಸಿದರು. ರಾಜ್ಯಮಟ್ಟದ ಈ ಕಾರ್ಯಕ್ರಮಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಮಾತ್ರವಲ್ಲದೆ, ಹೊರರಾಜ್ಯದಲ್ಲಿ ನೆಲೆಸಿದ ಕವಿಗಳೂ ಆಗಮಿಸಿದ್ದರು. ಲೀಲಾಕುಮಾರಿ ತೊಡಿಕಾನರವರು ಕುಶಾಲನಗರದ ಅನುಗ್ರಹ ಪದವಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!