Ad Widget

ಶುಭ ವಿವಾಹ : ಉಷಾ – ತೇಜಕುಮಾರ

ಗುತ್ತಿಗಾರು ಗ್ರಾಮದ ಅಡ್ಡನಪಾರೆ ನಿವಾಸಿ ಕಕ್ಯಾನ ಗುಡ್ಡೆಮನೆ ಶ್ರೀಮತಿ ಜಲಜಾಕ್ಷಿ ಮತ್ತು ಮಾಯಿಲಪ್ಪ ಗೌಡರ ಪುತ್ರಿ ಉಷಾಳ ವಿವಾಹವು ಗುತ್ತಿಗಾರು ಗ್ರಾಮದ ಪೈಕ ಗುಡ್ಡೆಮನೆ ಶ್ರೀಮತಿ ಜಾನಕಿ ಮತ್ತು ದಿ. ತಿಮ್ಮಪ್ಪ ಗೌಡರ ಪುತ್ರ ತೇಜಕುಮಾರ ರೊಂದಿಗೆ ಮೇ. 4 ರಂದು ಹಾಲೆಮಜಲು ಶ್ರೀ ವೆಂಕಟೇಶ್ವರ ಸಭಾಭವನದಲ್ಲಿ ನಡೆಯಿತು.

ನ್ಯಾಷನಲ್ ಲೆವೆಲ್ ಅಬಾಕಸ್ ಸ್ಪರ್ಧೆ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ 6 ವಿದ್ಯಾರ್ಥಿಗಳಿಗೆ
ಸಮಗ್ರ ಪ್ರಶಸ್ತಿ

ಪುತ್ತೂರು ಸಿಟಿ ಆಸ್ಪತ್ರೆ ಬಳಿ ಕಾರ‍್ಯಾಚರಿಸುತ್ತಿರುವ ಐಆರ್‌ಸಿಎಂಡಿ ಶಿಕ್ಷಣ ಸಂಸ್ಥೆಯ 21 ವಿದ್ಯಾರ್ಥಿಗಳು ಎಪ್ರಿಲ್ 10 ರಂದು ನಡೆದ ನ್ಯಾಷನಲ್ ಲೆವೆಲ್ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ, ಅರ್ಹತಾ ಅಂಕಗಳನ್ನು ಗಳಿಸುವುದರೊಂದಿಗೆ, 6 ವಿದ್ಯಾರ್ಥಿಗಳು ಚಾಂಪಿಯನ್ ಆಗಿ ಹೊರ ಹೊಮ್ಮುವ ಮೂಲಕ ಸಮಗ್ರ ಪ್ರಶಸ್ತಿಯನ್ನು ಪಡೆದು ಪುತ್ತೂರಿಗೆ ಕೀರ್ತಿಯನ್ನು ತಂದಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳು ಐಆರ್‌ಸಿಎಂಡಿ ಶಿಕ್ಷಣ...
Ad Widget

ಬೊಳುಬೈಲು : ನವಚೇತನ ಯುವಕ ಮಂಡಲದ ಪದಗ್ರಹಣ – ಅಧ್ಯಕ್ಷ ಶಶಿಪ್ರಸಾದ್ ಕಾಟೂರು, ಕಾರ್ಯದರ್ಶಿ ನಿತಿನ್ ಅರ್ಭಡ್ಕ

ನವ ಚೇತನ ಯುವಕ ಮಂಡಲ ಬೊಳುಬೈಲು ಇದರ ವಾರ್ಷಿಕ ಮಹಾಸಭೆ ಮತ್ತು 2022-23ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೇ.3 ರಂದು ಯುವಕ ಮಂಡಲದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾಧ್ಯಕ್ಷ ಸುಧೀರ್ ನೆಕ್ರಾಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ದಯಾನಂದ ಕೇರ್ಪಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು....

ಹರಿಹರ ಪಲ್ಲತ್ತಡ್ಕ : ಮೇ.06 ರಿಂದ ಯೋಗ ಶಿಬಿರ

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಮೇ.06 ರಿಂದ ಮೇ.25 ರವರೆಗೆ ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಯೋಗ ಶಿಬಿರ ನಡೆಯಲಿದೆ.

ಪೆರಾಜೆಯಲ್ಲಿ ಈಜು ತರಬೇತಿ ಶಿಬಿರ ಉದ್ಘಾಟನೆ

ಪೆರಾಜೆಯ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘ ಇದರ ಆಶ್ರಯದಲ್ಲಿ ಪೆರಾಜೆಯ ಪಯಸ್ವಿನಿ ಸೇತುವೆ ಬಳಿ ಈಜು ತರಬೇತಿ ಶಿಬಿರದ ಉದ್ಘಾಟನೆ ನಡೆಯಿತು. ಶಿಬಿರವನ್ನು ಪೆರಾಜೆ ಶ್ರೀ ಶಾಸ್ತಾವು ದೇವಳದ ಮೊಕ್ತೇಸರ ವಿಶ್ವನಾಥ ಕುಂಬಳಚೇರಿ ಉದ್ವಾಟಿಸಿದರು. ಈ ಸಂದರ್ಭದಲ್ಲಿ ಸಂಘಟಕರಾದ ಪೆರಾಜೆ ಅಯ್ಯಪ್ಪ ದಿಪೋತ್ಸವ ಸಮಿತಿ ಕಾರ್ಯದರ್ಶಿ ಸುರೇಶ್ ಪೆರುಮುಂಡ, ನಿರ್ದೇಶಕ ರಾದ ಯುವಾನಂದ ಪೆರಂಗಜೆ...
error: Content is protected !!