Ad Widget

ರಂಗ ನಿರ್ದೇಶಕ ಜೀವನ್ ರಾಂ ಅವರಿಗೆ ಆರ್ಯಭಟ ಪ್ರಶಸ್ತಿ – ಮೇ.25 ರಂದು ಬೆಂಗಳೂರಿನಲ್ಲಿ ಪ್ರದಾನ

ಕರ್ನಾಟಕದ ಪ್ರಸಿದ್ಧ ರಂಗಭೂಮಿ ಕಲಾವಿದ, ಕರ್ನಾಟಕ ಯಕ್ಷ ರಂಗಾಯಣ ನಿರ್ದೇಶಕ ಜೀವನ್ ರಾಂ ಸುಳ್ಯ ಇವರಿಗೆ 2021-22ನೇ ಸಾಲಿನ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿ ಲಭಿಸಿದೆ.

ಜೀವನ ರಾಂ ಅವರು ರಂಗಭೂಮಿಯ ವಿವಿಧ ಪ್ರಕಾರಗಳಲ್ಲಿ ಕಳೆದ 25 ವರ್ಷಗಳಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಕಲಾ ವೇದಿಕೆಯು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ.

ರಂಗ ಚಟುವಟಿಕೆಯಲ್ಲಿ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಅವರಿಗೆ ಮೇ. 25ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ವೇದಿಕೆಯ ಪ್ರಕಟಣೆ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!