ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್.06ರಂದು ಆಚರಿಸಲಾಯಿತು. ಪರಿಸರ ದಿನದ ಪ್ರಯುಕ್ತ ಪರಿಸರ ಸಂರಕ್ಷಣೆಯ ಸಲುವಾಗಿ ಗಿಡಗಳನ್ನು ನೆಡಲಾಯಿತು.

ತರವಾಡು ಮನೆಗಳು ಮಕ್ಕಳಿಗೆ ಧಾರ್ಮಿಕ ಶಿಕ್ಷಣ, ಶಿಸ್ತು, ಶ್ರದ್ಧೆಯನ್ನು ಕಳುಹಿಸುವ ಶ್ರದ್ಧಾ ಕೇಂದ್ರವಾಗಲಿ

ನಮ್ಮ ತುಳುನಾಡಿನಲ್ಲಿ ತರವಾಡು ಮನೆಗೆ ಭಾರಿ ಮಹತ್ವವಿದೆ . ತರವಾಡು ಮನೆಯಿಲ್ಲದ ಕುಟುಂಬವಿರದು. ತರವಾಡು ಮನೆಯು ತನ್ನ ಕುಟುಂಬದ ಮನೆಗಳ ದೈವಗಳ ಕಾರ್ಯ ದೇವರ ಕಾರ್ಯಗಳ ಮುಂದುವರಿಕೆಗೆ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ತರವಾಡು ಮನೆಯ ಯಜಮಾನನು ತನ್ನದೆ ಆದ ಗೌರವವನ್ನು ಹೊಂದಿದ್ದು , ಕುಟುಂಬ ಸದಸ್ಯರನ್ನು ಪ್ರೀತಿ , ಸಹನೆ , ತಾಲ್ಮೆಯಿಂದ ಸಮರ್ಪಕವಾಗಿ ನಿಭಾಯಿಸುವ...
Ad Widget

ಜೂ.11 ; ಸುಳ್ಯದಲ್ಲಿ ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿ ಸ್ಥಳಾಂತರ

ರಾಜ್ಯದಲ್ಲೇ ಪ್ರಥಮ ಬಾರಿಗೆ ವಿಕಲಚೇತನರು ಸೇರಿ ಹುಟ್ಟು ಹಾಕಿದ ಸಹಕಾರಿ ಸಂಘ ಸುಳ್ಯದಲ್ಲಿ ಆರಂಭಗೊಂಡಿತ್ತು. ಕುರುಂಜಿಭಾಗ್ ಬಳಿ ಆರಂಭಗೊಂಡಿದ್ದ ಸಂಸ್ಥೆಯ ಪ್ರಧಾನ ಕಛೇರಿ ಜೂ 6 ರಂದು ಸ್ಥಳಾಂತರಗೊಂಡು ಜ್ಯೋತಿ ಸರ್ಕಲ್ ಬಳಿಯ ಕರಾವಳಿ ಟವರ್ ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಭರತ್ ಬಲ್ನಾಡ್ ಕಟ್ಟೆಮನೆ ತಿಳಿಸಿದ್ದಾರೆ.

ಆಮ್ ಆದ್ಮಿ ಪಕ್ಷಕ್ಕೆ ಅಶೋಕ್ ಎಡಮಲೆ ರಾಜೀನಾಮೆ

ಆಮ್ ಆದ್ಮಿ ಪಕ್ಷದ ಸುಳ್ಯ ವಿಧಾನಸಭಾ ಕ್ಷೇತ್ರ ಸಂಚಾಲಕ ಹಾಗೂ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿರುವ ಅಶೋಕ್ ಎಡಮಲೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ತಮ್ಮ ಹುದ್ದೆಗಳಿಗೆ ಹಾಗು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆಯನ್ನು ರಾಜ್ಯ ಸಂಚಾಲಕರಿಗೆ ಸಲ್ಲಿಸಿದ್ದಾರೆ ಆದರೆ ರಾಜಿನಾಮೆ ಅಂಗೀಕಾರ ಆಗಿಲ್ಲ ಎಂದು ತಿಳಿದುಬಂದಿದೆ. ರಾಜೀನಾಮೆ ನೀಡಿರುವುದು...

ನೆಲ್ಲೂರುಕೆಮ್ರಾಜೆ : ಗೋದಾಮು‌ ಕಟ್ಟಡಕ್ಕೆ ಬೆಂಕಿ; ವೃದ್ಧ ಸಜೀವ ದಹನ

ಗೋದಾಮು ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ವೃದ್ಧ ಕೃಷಿಕರೋರ್ವರು ಸಜೀವ ದಹನವಾದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನೂಜಾಲ ನಿವಾಸಿ ಮಹಾಲಿಂಗೇಶ್ವರ ಭಟ್ ಮೃತ ದುರ್ದೈವಿ. ಅಡಿಕೆ ಹಾಗೂ ಕೃಷಿ ಉತ್ಪನ್ನಗಳ ದಾಸ್ತಾನಿರಿಸಿದ್ದ ಕಟ್ಟಡಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗುತ್ತಿದ್ದು, ವೃದ್ಧನ ಸಂಪೂರ್ಣ ಸುಟ್ಟ ಮೃತದೇಹ ಅವುಗಳೆಡೆ...

ಸುಳ್ಯ : ಗುಂಡು ಹಾರಿಸಿ ಯುವಕನ ಕೊಲೆಯತ್ನ – ಅಪರಿಚಿತ ತಂಡದಿಂದ ದಾಳಿ – ಅಪಾಯದಿಂದ ಪಾರಾದ ಯುವಕ

ಗುಂಡಿನ ಸದ್ದು ಸುಳ್ಯವನ್ನು ಮತ್ತೊಮ್ಮೆ ಬೆಚ್ಚಿ ಬೀಳಿಸಿದೆ. ಜೂ. 5 ರಂದು ರಾತ್ರಿ ಅಪರಿಚಿತ ತಂಡವೊಂದು ಯುವಕ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ದಾಳಿಗೆ ಒಳಗಾದ ಯುವಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಆತನ ಕಾರಿಗೂ ಗುಂಡೇಟು ತಗುಲಿದೆ. ಜಯನಗರ ನಿವಾಸಿ ಮಹಮ್ಮದ್ ಸಾಯಿ ಗುಂಡಿನ ದಾಳಿಗೆ ಒಳಗಾದವರು.ಸುಳ್ಯದ ಜ್ಯೋತಿ ಸರ್ಕಲ್‌ ಸಮೀಪ...
error: Content is protected !!