Ad Widget

ಸುಳ್ಯ :- ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ರೆಡ್ ಕ್ರಾಸ್ ಸಮಿತಿ ವತಿಯಿಂದ ಸನ್ಮಾನ

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಜೂ.14 ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಇದರ ವತಿಯಿಂದ ಸುಳ್ಯ ವರ್ತಕರ ಸಂಘದ ಸಭಾಭವನದಲ್ಲಿ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಕ್ತದಾನ ವಾಟ್ಸಾಪ್ ಗುಂಪಿನ ಅಡ್ಮಿನ್ ಗಳನ್ನು, ಸುಳ್ಯ ಯುವ ರೆಡ್ ಕ್ರಾಸ್ ಗಳನ್ನು, ರಕ್ತದಾನಿಗಳನ್ನು ಹಾಗೂ ಪ್ರೋತ್ಸಾಹಕರನ್ನು ಸನ್ಮಾನಿಸಲಾಯಿತು.


ಕೆ.ವಿ.ಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ್ ಅವರು ಸನ್ಮಾನಿತರನ್ನು ಸನ್ಮಾನಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ವಿಭಾಗದ ಅಧ್ಯಕ್ಷರಾದ ಸುಧಾಕರ್ ರೈ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಸಭಾಪತಿ ಹಾಜಿ ಕೆ.ಎಂ ಮುಸ್ತಾಫ, ಕಾರ್ಯದರ್ಶಿ ತಿಪ್ಪೇಶಪ್ಪ, ಕೋಶಾಧಿಕಾರಿ ವಿನಯ್ ಕುಮಾರ್, ಜಿಲ್ಲಾ ಪ್ರತಿನಿಧಿ ಡಾ| ಗಣೇಶ್ ಭಟ್ ಸೇರಿದಂತೆ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ಕೆ.ನಾರಾಯಣ್, ಸಂಸ್ಥೆಯ ನಿರ್ದೇಶಕರುಗಳಾದ ಚಂದ್ರಕಾಂತ್.ಎಂ.ಆರ್, ಇಸ್ಮಾಯಿಲ್ ಪಡ್ಪಿನಂಗಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!