Ad Widget

ಬಾವುಟಗುಡ್ಡೆಯಲ್ಲಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆಗೊಳ್ಳಲಿದ್ದು ಸುಳ್ಯದಿಂದ ಟ್ಯಾಬ್ಲೋ ನಿರ್ಮಾಣಕ್ಕೆ ತಹಶೀಲ್ದಾರ್ ಗೆ ಮನವಿ

ಮಂಗಳೂರಿನ ಹೃದಯ ಭಾಗವಾದ ಭಾವುಟಗುಡ್ಡೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮ 1837ರ ನಾಯಕತ್ವ ವಹಿಸಿದ ಸಮರವೀರ ಸುಳ್ಯದ ಮಣ್ಣಿನ ಮಗ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಅನಾವರಣ ಸಂದರ್ಭದಲ್ಲಿ ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದಿಂದ ಸ್ವಾತಂತ್ರ್ಯ ಹೋರಾಟಗಾರರ ಟ್ಯಾಬ್ಲೋವನ್ನು ರಚಿಸಿ ಜಿಲ್ಲೆಯಾದ್ಯಂತ ಸರ್ವ ಜನಾಂಗದ ಜನರ ಸಹಕಾರದೊಂದಿಗೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದು.ಹಾಗೂ ಸುಳ್ಯದ ಬೆಳ್ಳಾರೆ ಬಂಗ್ಲೆಗುಡ್ಡೆಯಲ್ಲಿ ವೀರ ಮರಣವನ್ನು ಹೊಂದಿದ ಹಲವಾರು ಹೋರಾಟಗಾರರ ಸವಿನೆನಪಿಗಾಗಿ ಸ್ಮಾರಕ ರಚಿಸುವುದು ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸುಳ್ಯ ಗೌಡರ ಯುವ ಸೇವಾ ಸಂಘದ ನೇತೃತ್ವದಲ್ಲಿ ಅದ್ದೂರಿಯ ಕಾರ್ಯಕ್ರಮವನ್ನು ನಡೆಸುವಂತಾಗಲು ತಹಶೀಲ್ದಾರ್ ಕು. ಅನಿತಾಲಕ್ಷ್ಮೀಯವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ದಿನೇಶ್ ಮಡಪ್ಪಾಡಿ, ಬೆಳ್ಯಪ್ಪ ಗೌಡ, ಪಿ. ಯಸ್. ಗಂಗಾಧರ್ ಹಾಗೂ ಮೂಸಾ ಫೈಂಬೆಚ್ಚಾಲ್ ರವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!