Ad Widget

ಅಜ್ಜಾವರ : ಪ್ರತಾಪ ಯುವಕ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ

ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.12 ರಂದು ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶಿವಪ್ರಕಾಶ್ ಅಡ್ಪಂಗಾಯವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವಜನ ಸಂಯುಕ್ತ ಮಂಡಳಿ ಯ ಪೂರ್ವ ಅಧ್ಯಕ್ಷರಾದ ದಿನೇಶ್ ಮಾಡಪ್ಪಾಡಿ ಯವರು ಉದ್ಘಾಟಿಸಿದರು.
ನೂತನ ಪದಾಧಿಕಾರಿಗಳಿಗೆ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ದಯಾನಂದ ರವರು ಪ್ರಮಾಣ ವಚನ ಬೋಧಿಸಿ ಮಾತನಾಡಿದರು.
ನೂತನ ಅಧ್ಯಕ್ಷರಾದ ಗುರುರಾಜ್ ಅಜ್ಜಾವರವರಿಗೆ ಅಧ್ಯಕ್ಷರಾದ ಶಿವ ಪ್ರಕಾಶ್ ಅಡ್ಪಂಗಾಯವರು ಅಧಿಕಾರವನ್ನು ಹಸ್ತಾಂತರ ಮಾಡಿದರು. ಮುಖ್ಯ ಅತಿಥಿಗಳಾಗಿ ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸತ್ಯವತಿ ಬಸವನಪಾದೆ, ಮತ್ತು ಉಪ ಅಧ್ಯಕ್ಷರಾದ ಶ್ರೀಮತಿ ಲೀಲಾ ಮನಮೋಹನ ಮುಡೂರು,
ಸರಕಾರಿ ಪ್ರೌಢ ಶಾಲೆಯ ಮುಖ್ಯ್ಯೋಪಾದ್ಯಾಯರಾದ ಗೋಪಿನಾಥ್ ಮೆತ್ತಡ್ಕ ರವರು ಭಾಗವಹಿಸಿದ್ದರು. ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕು. ಚರೀಷ್ಮಾ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ವಿಕ್ರಮ್ ಅಡ್ಪಂಗಾಯ ಸ್ವಾಗತಿಸಿ,
ಕಾರ್ಯದರ್ಶಿ ಅನಿಲ್ ಕರ್ಲಪ್ಪಾಡಿ ವಂದಿಸಿ, ರಮೇಶ್ ಮೇದಿನಡ್ಕ ಕಾರ್ಯಕ್ರಮ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!