Ad Widget

ಕಳಂಜ ಬಾಳಿಲ ಸಹಕಾರಿ ಸಂಘದ ಗೋದಾಮು ಕಟ್ಟಡ ಉದ್ಘಾಟನೆ

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡ ಮತ್ತು ಪಂಜಿಗಾರು ಶಾಖೆಯ ಉದ್ಘಾಟನೆ ಜೂ. 19ರಂದು ನಡೆಯಿತು.
ಸಂಘದ ಮಾಜಿ ಅಧ್ಯಕ್ಷ ಮತ್ತು ಸ್ಕಾಡ್ಸ್ ಲಿ. ಮಂಗಳೂರಿನ ಮಾಜಿ ಅಧ್ಯಕ್ಷ ವಾರಣಾಶಿ ಗೋಪಾಲಕೃಷ್ಣ ಪಂಜಿಗಾರು ಶಾಖೆಯನ್ನು ಉದ್ಘಾಟಿಸಿದರು.

ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ನೆರವೇರಿಸಿದರು. ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ಬಾಳ್ಯೊಟ್ಟು, ಸುಳ್ಯ ಸಹಕಾರ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ಗುರುರಾಜ್, ಕಳಂಜ ಗ್ರಾ.ಪಂ. ಅಧ್ಯಕ್ಷ ಪ್ರಶಾಂತ್ ಕುಮಾರ್ ಕಿಲಂಗೋಡಿ, ಸಂಘದ ಉಪಾಧ್ಯಕ್ಷೆ ಶ್ರೀಮತಿ ಮಾಲಿನಿ ಪ್ರಸಾದ್, ನಿರ್ದೇಶಕರಾದ ಎನ್. ವಿಶ್ವನಾಥ ರೈ, ಬಿ. ಸುಭಾಶ್ಚಂದ್ರ ರೈ, ವಿಶ್ವನಾಥ ಪರವ, ಮೇದಪ್ಪ ಗೌಡ ತಂಟೆಪ್ಪಾಡಿ, ಸುಬ್ರಹ್ಮಣ್ಯ ಕಾವಿನಮೂಲೆ, ಕರುಣಾಕರ ಶೆಟ್ಟಿ, ಭಾರತೀಶಂಕರ ಆದಳ, ಶ್ರೀಮತಿ ಪುಷ್ಪಾವತಿ ಬಾಳಿಲ, ಶುಭಕುಮಾರ್ ಬಾಳೆಗುಡ್ಡೆ, ಶ್ರೀಮತಿ ಪಂಕಜಾಕ್ಷಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಘದ ನಿರ್ದೇಶಕ ಅಜಿತ್ ರಾವ್ ಕಿಲಂಗೋಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ವಾರ್ಷಿಕ ವರದಿ ವಾಚಿಸಿದರು.

ಕೋಟೆಮುಂಡುಗಾರು ಪ್ರಧಾನ ಕಚೇರಿಯ ಸಿಬ್ಬಂದಿಗಳಾದ ಭಾಸ್ಕರ ಶೇಣಿ ಮತ್ತು ಗೀತಾಶ್ರೀ ಎಂ. ಕಾರ್ಯಕ್ರಮ ನಿರೂಪಿಸಿದರು. ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲಾ ವಿದ್ಯಾರ್ಥಿನಿಯರಾದ ಕು. ಮೌಲ್ಯ, ಕು. ನಂದನ, ಕು. ದೀಕ್ಷಾ, ಕು. ಸುಶ್ರೀ ಪ್ರಾರ್ಥಿಸಿದರು. ನವೋದಯ ಸಂಘದ ಸದಸ್ಯರಿಗೆ ಸಮವಸ್ತ್ರ ವಿತರಣೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!