Ad Widget

ಜೇಸೀಐ ಸುಳ್ಯ ಸಿಟಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೆಸಿಐ ಸುಳ್ಯ ಸಿಟಿಯ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯದಲ್ಲಿ ಆಚರಿಸಲಾಯಿತು. ಯೋಗ ತರಬೇತಿಯನ್ನು ಚಂದ್ರಶೇಖರ್ ಕನಕಮಜಲು ರವರು ನೆರವೇರಿಸಿದರು ಮ್ಯಾಟ್ರಿಕ್ಸ್ ವಿದ್ಯಾಸಂಸ್ಥೆ ಸುಳ್ಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಘಟಕಾದ್ಯಕ್ಷ ಬಶೀರ್ ಯು ಪಿ ಸ್ವಾಗತಿಸಿ, ಉಪಾಧ್ಯಕ್ಷರಾದ ರಂಜಿತ್ ಪಿ‌ಜೆ ವಂದಿಸಿದರು.

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಯೋಗ ದಿನಾಚರಣೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕರಾದ ಶ್ರೀ ರಾಧಾಕೃಷ್ಣ ಬೊಳ್ಳೂರು ಅವರು ವಹಿಸಿ, ಜೀವನದಲ್ಲಿ ಆರೋಗ್ಯಯುತವಾದ ಸದೃಢ ಶರೀರವನ್ನು ಇಟ್ಟುಕೊಳ್ಳಬೇಕಾದರೆ ಕನಿಷ್ಠ ಯೋಗಾಭ್ಯಾಸವನ್ನಾದರೂ ಅಳವಡಿಸಿಕೊಳ್ಳಬೇಕು ಹಾಗೂ ಅದನ್ನು ವಿದ್ಯಾರ್ಥಿ ಜೀವನದಲ್ಲೇ ರೂಢಿಸಿಕೊಳ್ಳಬೇಕು ಎಂದು ನುಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಯೋಗೇನ ಚಿತ್ತೈಸ್ಯ ಯೋಗ ಕೇಂದ್ರದ ಯೋಗಶಿಕ್ಷಕಿ...
Ad Widget

ಅಡ್ಕಾರು : ತೋಟಕ್ಕೆ ಉರುಳಿದ ಕೇರಳ ಸಾರಿಗೆ ಬಸ್

ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಚಲಿಸಿದ ಘಟನೆ ಜೂ. 21 ರಂದು ನಡೆದಿದೆ. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಎಸ್ ಡಿ ಪಿ ಐ ಬೆಳ್ಳಾರೆ ವತಿಯಿಂದ ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೆಳ್ಳಾರೆ ಅಂಗನವಾಡಿಯಲ್ಲಿ ಶ್ರಮದಾನ ಕಾರ್ಯಕ್ರಮ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಪಕ್ಷದ 13 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಶ್ರಮದಾನ ಕಾರ್ಯಕ್ರಮವು ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಗ್ರಾಮ ಸಮಿತಿ ಅಧ್ಯಕ್ಷರಾದ ಶಹೀದ್ ಬೆಳ್ಳಾರೆ, ಎಸ್‌ಡಿಪಿಐ ಬೆಳ್ಳಾರೆ ಬ್ಲಾಕ್ ಕಾರ್ಯದರ್ಶಿ ಮೊಯಿದಿನ್ ಯು ಎಚ್ ಹಾಗು ಎಸ್‌ಡಿಪಿಐ ಗ್ರಾಮ ಸಮಿತಿ, ಬೂತ್ ಸಮಿತಿ ಪದಾಧಿಕಾರಿಗಳು,...

ಬೆಳ್ಳಾರೆ: ಉಪಯೋಗಶೂನ್ಯ ರೀತಿಯಲ್ಲಿದೆ ಸಾರ್ವಜನಿಕ ಶೌಚಾಲಯ

ಸುಳ್ಯ ತಾಲೂಕಿನ ಎರಡನೇ ಅತೀ ದೊಡ್ಡ ಪೇಟೆ ಎನಿಸಿಕೊಂಡಿರುವ ಬೆಳ್ಳಾರೆ ಪೇಟೆಯ ಬೆಳ್ಳಾರೆ-ಸುಳ್ಯ ಮಾರ್ಗದಲ್ಲಿ ಬಸ್ಸು ತಂಗುದಾಣದ ಸಮೀಪವಿರುವ ಸಾರ್ವಜನಿಕ ಶೌಚಾಲಯ ಅವ್ಯವಸ್ಥೆಗಳಿಂದ ಉಪಯೋಗಶೂನ್ಯ ರೀತಿಯಲ್ಲಿದೆ. ಹೆಂಗಸರಿಗೆ ಹಾಗೂ ಗಂಡಸರಿಗೆ ಪ್ರತ್ಯೇಕ ಶೌಚಾಲಯವಿದ್ದರೂ ನೀರಿನ ಪೂರೈಕೆಯಿಲ್ಲದೆ ಶೌಚಾಲಯ ಸಾರ್ವಜನಿಕರಿಗೆ ಉಪಯೋಗವಾಗದೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ. ಶೌಚಾಲಯದ ಎದುರುಗಡೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಇದ್ದು ವಿದ್ಯಾರ್ಥಿಗಳು ಶಾಲೆ...

ಪಳ್ಳಿಮಜಲು ಬೂತ್ ಸಮಿತಿ ವತಿಯಿಂದ ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆ

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಗ್ರಾಮ ಸಮಿತಿಯ ಪಳ್ಳಿಮಜಲ್ ಬೂತ್ ವತಿಯಿಂದ ಪಕ್ಷದ 13ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜೂ.21ರಂದು ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು. ಪಳ್ಳಿಮಜಲು ಬೂತ್ ಅಧ್ಯಕ್ಷರಾದ ಸದ್ದಾಂ ಧ್ವಜಾರೋಹಣ ನೆರವೇರಿಸಿದರು. ಎಸ್‌ಡಿಪಿಐ ಬೆಳ್ಳಾರೆ ಗ್ರಾಮ ಸಮಿತಿ ಉಪಾಧ್ಯಕ್ಷರಾದ ಶಫೀಕ್ ಬೆಳ್ಳಾರೆ ಸಂದೇಶ ಬಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಪಳ್ಳಿಮಜಲು ಮಸೀದಿ ಕಾರ್ಯದರ್ಶಿ...

ಎಸ್ಸೆಸ್ಸೆಲ್ಸಿ ಟಾಪರ್ ಸಾತ್ವಿಕ್ ಎಚ್ ಎಸ್ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಅಮರಪಡ್ನೂರು ಗ್ರಾಮದ ಕಜೆಮೂಲೆ ಹಾಸನಡ್ಕ ಸಾತ್ವಿಕ್ ಎಚ್ ಎಸ್ ರವರನ್ನು ಗ್ರಾಮ ಪಂಚಾಯತ್ ವತಿಯಿಂದ ಜೂ.19ರಂದು ಗೌರವಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರು, ಮೀನಾಕ್ಷಿ ಚೂಂತಾರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ ಆಕಾಶ್ ರವರು ಗೌರವಿಸಿದರು. ಈ...

ಯೋಗ ಪಟು ಮೋನಿಷ್ ತಂಟೆಪ್ಪಾಡಿಯವರಿಗೆ ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ

ಥಾಯ್ಲೆಂಡ್ ನಲ್ಲಿ ಜರುಗುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾದ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಅಮರಪಡ್ನೂರು ಗ್ರಾಮದ ತಂಟೆಪ್ಪಾಡಿ ವಿಶ್ವನಾಥ ರವರ ಪುತ್ರ ಮೋನಿಷ್ ತಂಟೆಪ್ಪಾಡಿಯವರಿಗೆ ಅಮರಮೂಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಮತ್ತು ಗೌರವಾರ್ಪಣೆಯನ್ನು ಜೂ.19ರಂದು ಗ್ರಾಮ ಪಂಚಾಯತ್ ಸದಸ್ಯರಾದ ಅಶೋಕ್ ಚೂಂತಾರು, ಮೀನಾಕ್ಷಿ ಚೂಂತಾರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ.ಆಕಾಶ್ ರವರು ಹಮ್ಮಿಕೊಂಡರು....
error: Content is protected !!