Ad Widget

ಬಾಳುಗೋಡು : ಗ್ರಾಮಾಭಿವೃದ್ಧಿ ಯೋಜನೆಯ ಬಾಳುಗೋಡು ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ಬಾಳುಗೋಡು ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ.26 ರಂದು ದ.ಕ.ಜಿ.ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡು ಇಲ್ಲಿ ನಡೆಯಿತು.
ಭಾರತೀಯ ಭೂ ಸೇನೆಯ ನಿವೃತ್ತ ಸೈನಿಕರಾದ ಧನಂಜಯ.ಬಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕೆ.ವಿ.ಜಿ ಪವರ್ ಹೌಸ್ ಕಾರ್ಯನಿರ್ವಹಣಾಧಿಕಾರಿ ವಸಂತ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ದ.ಕ.ಜಿ.ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ತಾರಾಮತಿ.ಎಮ್, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಮಾಧವ ಚಾಂತಾಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಆಂತರಿಕ ಲೆಕ್ಕ ಪರಿಶೋಧಕರಾದ ಉಮೇಶ್ ಇವರುಗಳು ಉಪಸ್ಥಿತರಿದ್ದರು.
ಹಾಗೂ ಬಾಳುಗೋಡು ಒಕ್ಕೂಟದ ನಿರ್ಗಮಿತ ಅಧ್ಯಕ್ಷರಾದ ಲೋಕೇಶ್.ಬಿ.ಡಿ ಹಾಗೂ ಬಾಳುಗೋಡು ಒಕ್ಕೂಟದ ನೂತನ ಅಧ್ಯಕ್ಷರಾದ ನಾಗೇಶ್.ಬಿ ಇವರುಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್, ಸೇವಾಪ್ರತಿನಿಧಿ ನಾಗವೇಣಿ ಹಾಗೂ ಬಾಳುಗೋಡು ಒಕ್ಕೂಟದ ಸರ್ವಸದಸ್ಯರುಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.
ಬಾಳುಗೋಡು ಒಕ್ಕೂಟದ ನಿರ್ಗಮಿತ ಅಧ್ಯಕ್ಷರಾದ ಲೋಕೇಶ್.ಬಿ.ಡಿ ಸ್ವಾಗತಿಸಿ, ಸೇವಾಪ್ರತಿನಿಧಿ ನಾಗವೇಣಿ ಧನ್ಯವಾದ ಸಮರ್ಪಿಸಿದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!