Ad Widget

ಕುಕ್ಕೆ ಸುಬ್ರಹ್ಮಣ್ಯ :- ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಜೂ.26 ರಂದು ಭೇಟಿ ನೀಡಿದ್ದು, ಜೂ.27 ರಂದು ದೇವರ ದರ್ಶನ ಪಡೆದು ಆಶ್ಲೇಷ ಪೂಜೆಯಲ್ಲಿ ಭಾಗಿಯಾದರು.
ತೀರ್ಥಹಳ್ಳಿಯ ಪುರುಷೋತ್ತಮ ರಾವ್ ಕೃಷಿ ಸಂಶೋಧನಾ ಪ್ರತಿಷ್ಠಾನದ ವತಿಯಿಂದ ನಡೆದ ಆಶ್ಲೇಷ ಪೂಜೆ, ಶೇಷ ಸೇವೆಯಲ್ಲಿ ಪಾಲ್ಗೊಂಡರು.
ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳು ಸ್ವಾಗತಿಸಿದರು.
ದೇವಸ್ಥಾನ ಭೇಟಿ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಕರ್ನಾಟಕ ಸರ್ಕಾರದ ಸಾವಯವ ಕೃಷಿ ಮೆಷಿನ್ ನ ಅಧ್ಯಕ್ಷರಾದ ಜೆ.ಎಸ್ ಆನಂದ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶ್ರೀವತ್ಸ, ಶೋಭಾ ಗಿರಿಧರ್, ವನಜಾ ಭಟ್, ಜಯಪ್ರಕಾಶ್ ಕೂಜುಗೋಡು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!