Ad Widget

ತಳೂರು : ಮಗುವಿನೊಂದಿಗೆ ಕೆರೆಗೆ ಹಾರಿದ ತಾಯಿ – ತಾಯಿ ಮೃತ್ಯು- ಬದುಕುಳಿದ ಮೂರು ವರ್ಷದ ಮಗು

ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಮಗುವಿನ ಜತೆಗೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ‌. ಮೂರು ವರ್ಷದ ಹೆಣ್ಣು ಮಗು ಪೂರ್ವಿಕಾ ಅದೃಷ್ಟವಶಾತ್ ಬದುಕುಳಿದ ಘಟನೆ ವರದಿಯಾಗಿದೆ. ತಳೂರು ದಯಾನಂದ ಎಂಬವರ ಪತ್ನಿ ಗೀತಾ ಮೃತಪಟ್ಟ ಮಹಿಳೆ. ಇವರು ಎನ್.ಎಮ್.ಸಿ. ನಲ್ಲಿ ಕಛೇರಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಮಗು ಕೆರೆಯೊಳಗೆ ಕಲ್ಲಿನ‍ ಸಹಾಯದಿಂದ ಬದುಕುಳಿದಿದ್ದು, ಸುಳ್ಯ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತಂದಿರುವುದಾಗಿ ತಿಳಿದು ಬಂದಿದೆ. ಮನೆಯವರು ಹಾಗೂ ಸ್ಥಳೀಯರ ಸಹಕಾರದಿಂದ ಮಗುವನ್ನು ರಕ್ಷಿಸಲಾಯಿತು ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!