Ad Widget

ಹರಿಹರ ಪಲ್ಲತ್ತಡ್ಕ :- ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವತಿಯಿಂದ ಜೂ.16 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು.ವಿದ್ಯಾರ್ಥಿ ಅಶ್ವಿನ್ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಕವನ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ, ಪದ್ಮಾವತಿ ಕಲ್ಲೇಮಠ, ಶಿಲ್ಪಾ...

ಜೂ.18 ರಂದು ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್

ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಪ್ರತೀ ತಿಂಗಳ 3ನೇ ಶನಿವಾರ ವಿದ್ಯುತ್ ಅದಾಲತ್ ನಡೆಯಲಿದ್ದು, ಜೂ.18 ನೇ ಶನಿವಾರದಂದು ಪೂರ್ವಾಹ್ನ 11:00 ಗಂಟೆಗೆ ಕೊಡಿಯಾಲ ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸಲು ವಿದ್ಯುತ್ ಕಾರ್ಯಪಾಲಕ ಇಂಜಿನಿಯರ್ ಹಾಗೂ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಅದಾಲತ್...
Ad Widget

ಜೂ.18 ರಂದು ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್

ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಪ್ರತೀ ತಿಂಗಳ 3ನೇ ಶನಿವಾರದಂದು ವಿದ್ಯುತ್ ಅದಾಲತ್ ನಡೆಯಲಿದ್ದು, ಜೂ.18 ರಂದು ಪೂರ್ವಾಹ್ನ 11:00 ಗಂಟೆಗೆ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ವಿದ್ಯುತ್ ಅದಾಲತ್ ನಡೆಯಲಿದೆ. ಗ್ರಾಮೀಣ ಜನತೆಯ ವಿದ್ಯುತ್ ಸಮಸ್ಯೆಗಳನ್ನು ಆಲಿಸಲು ವಿದ್ಯುತ್ ಕಾರ್ಯಪಾಲಕ ಇಂಜಿನಿಯರ್ ಹಾಗೂ ಅಧಿಕಾರಿಗಳು ಆಗಮಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯುತ್ ಅದಾಲತ್ ನಲ್ಲಿ...

ಗುತ್ತಿಗಾರು : ಅಂಬುಲೆನ್ಸ್ ಸೇವೆ ಪುನರಾರಂಭ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ಇದರ ಅಮರ ಸೇನಾ ಅಂಬುಲೆನ್ಸ್ ಸೇವೆಯು ಜೂ.17 ರಿಂದ ಪುನರಾರಂಭಗೊಂಡಿದ್ದು, 24*7 ಸೇವೆಗೆ ಲಭ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಮೊ : 9480199711, 8310641776, 9483831086 ವರದಿ :- ಉಲ್ಲಾಸ್ ಕಜ್ಜೋಡಿ

ಬೆಳ್ಳಾರೆ: ಕೊಳೆತು ನಾರುತ್ತಿದ್ದ ಸಂತೆ ಮಾರುಕಟ್ಟೆ ತ್ಯಾಜ್ಯ ವಿಲೇವಾರಿ ಮಾಡಿದ ಗ್ರಾಮ ಪಂಚಾಯತ್

ಬೆಳ್ಳಾರೆಯ ಮೇಲಿನ ಪೇಟೆಯಲ್ಲಿರುವ ಸಂತೆ ಮಾರುಕಟ್ಟೆಯಲ್ಲಿ ತರಕಾರಿ ಹಾಗೂ ಇತರೇ ತ್ಯಾಜ್ಯವನ್ನು ಕಳೆದ ಶನಿವಾರದಿಂದ ವಿಲೇವಾರಿ ಮಾಡದೆ ಕೊಳೆತ ಸ್ಥಿತಿಯಲ್ಲಿದ್ದು, ಪಕ್ಕದ ಆಟೋ ನಿಲ್ದಾಣ ಹಾಗೂ ಬಸ್ ತಂಗುದಾಣಕ್ಕೆ ಕೊಳೆತ ವಾಸನೆ ಹರಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ಕಳೆದ ಆದಿತ್ಯವಾರ ಕರ್ನಾಟಕ ರಾಷ್ಟ್ರ ಸಮಿತಿ ಸುಳ್ಯ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿಯವರು ಗ್ರಾಮ ಪಂಚಾಯತ್...

ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಪ್ರತಿಭಾ ಆಯ್ಕೆ ಸ್ಪರ್ಧೆ ಮತ್ತು ವನಮಹೋತ್ಸವ ಕಾರ್ಯಕ್ರಮ

ದಿನಾಂಕ 10/6/2022 ಶುಕ್ರವಾರದಂದು ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಸಾಂಸ್ಕೃತಿಕ ಪ್ರತಿಭಾ ಆಯ್ಕೆ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಹಾಗೂ ಮುಖ್ಯ ಅತಿಥಿಗಳಾಗಿ ಡಾ. ಗೋವಿಂದ ಎನ್. ಎಸ್. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರು, ಕೆ.ಎಸ್.ಎಸ್ ಕಾಲೇಜು, ಸುಬ್ರಹ್ಮಣ್ಯ ಇವರು ಭಾಗವಹಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಇವರು...

ನಡುಗಲ್ಲು: ಬೀಜ ಬಿತ್ತನೆ ಕಾರ್ಯಕ್ರಮ

ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇವುಗಳ ಜಂಟಿ ಆಶ್ರಯದಲ್ಲಿ ಬೀಜ ಬಿತ್ತನೆ ಕಾರ್ಯ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿಯ ಸದಸ್ಯರುಗಳು, ಉಭಯ ಶಾಲೆಗಳ ಅಧ್ಯಕ್ಷರು, ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾ ಮಕ್ಕಳು, ಊರ...

ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗಳಿಗೆ ವಿ ಹೆಚ್ ಪಿ ಮನವಿ

ಇತ್ತೀಚೆಗೆ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ. ಭಗವಾನ್ ಶ್ರೀರಾಮನ ಹಬ್ಬವಾದ ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ಮತ್ತು ವ್ಯವಸ್ಥಿತವಾಗಿ ದಾಳಿಗಳನ್ನು ನಡೆಸಲಾಯಿತು. ಇದರಿಂದಾಗಿ ಹಲವೆಡೆ ಕರ್ಫ್ಯೂ ವಿಧಿಸಲಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಂದೂ ಸಮಾಜವು ತಾಳ್ಮೆಯನ್ನು ಕಾಯ್ದುಕೊಂಡಿದೆ. ಇದರಿಂದಾಗಿ ಯಾವುದೇ ದೊಡ್ಡ...

ಭಾ ಜ ಪಾ ಯುವಮೋರ್ಚಾ ಬೆಳ್ಳಾರೆ ಮಹಾಶಕ್ತಿಕೇಂದ್ರ ತಂಡದಿಂದ ಸಸಿ ನೆಡುವ ಕಾರ್ಯಕ್ರಮ

ಬೆಳ್ಳಾರೆ ಯುವಮೋರ್ಚಾ ಮಹಾಶಕ್ತಿ ಕೇಂದ್ರ ತಂಡದ ವತಿಯಿಂದ ಸಸಿ ನೆಡುವ ಕಾರ್ಯಕ್ರಮವು ಬೆಳ್ಳಾರೆ ಅಯ್ಯಪ್ಪ ಭಜನಾ ಮಂದಿರದ ಬಳಿ ನಡೆಯಿತು. ಈ ಸಂದರ್ಭದಲ್ಲಿ ಯುವಮೋರ್ಚಾ ಮಹಾಶಕ್ತಿಕೇಂದ್ರದ ಅಧ್ಯಕ್ಷರಾದ ಹರ್ಷಿತ್ ಕುಮಾರ್ ಪೆರುವಾಜೆ, ಕಾರ್ಯದರ್ಶಿ ಲೋಕೇಶ್ ಬೆಳ್ಳಾರೆ,ಯುವಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರ್, ಹಿರಿಯರಾದ ನಿಶಾಂತ್ ಡ್ರೈವಿಂಗ್ ಸ್ಕೂಲ್ ನ ಮಾಲಕರಾದ ಗೋಪಾಲ್ ಶೆಟ್ಟಿ ಮಂಡೆಪು,...

ಕನಸಿಗೊಂದಿಷ್ಟು ಬಣ್ಣ ಕವನ ಸಂಕಲನ ಬಿಡುಗಡೆ

ಕನಸಿಗೊಂದಿಷ್ಟು ಬಣ್ಣ ಕವನ ಸಂಕಲನ ಬಿಡುಗಡೆ ಜೂ.10 ರಂದು ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಪ್ರತಿಭಾ ದಿನಾಚರಣೆ ಕಾರ್ಯಕ್ರಮದಲ್ಲಿ ನಡೆಯಿತು. ಕವನ ಸಂಕಲನವನ್ನು ಕವಿ ನಾರಾಯಣ ನೀರಬಿದಿರೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ.ಆರ್. ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಬ್ಬಾರ್ ಸಂಪಾಜೆ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಮಿತಿಯ...
Loading posts...

All posts loaded

No more posts

error: Content is protected !!