Ad Widget

ಎಸ್.ಡಿ.ಪಿ.ಐ. ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಸಾಮಾಜಿಕ ಕಾರ್ಯಕ್ರಮ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಎಸ್‌ಡಿಪಿಐ ಸಂಪಾಜೆ ಗ್ರಾಮ ಸಮಿತಿಯ ವತಿಯಿಂದ ಒಂದು ವಾರಗಳ ನಿರಂತರ "ಸಾಮಾಜಿಕ ಕಾರ್ಯಕ್ರಮ"ಕ್ಕೆ ಜೂನ್ 18 ರಂದು ಗ್ರಾಮ ಸಮಿತಿ ಕಾರ್ಯದರ್ಶಿ ಶರೀಫ್ ಸೆಟ್ಟಿಯಡ್ಕ ಚಾಲನೆಯನ್ನು ನೀಡಿದರು. ಇದರ ಅಂಗವಾಗಿ ಸಂಪಾಜೆ ಗ್ರಾಮ ವ್ಯಾಪ್ತಿಯ ಸುಮಾರು 11 ಬಸ್ಸು ತಂಗುದಾಣಗಳನ್ನು ಸ್ವಚ್ಛಗೊಳಿಸಲಾಯಿತು....

ಕಳಂಜ ಬಾಳಿಲ ಸಹಕಾರಿ ಸಂಘದ ಗೋದಾಮು ಕಟ್ಟಡ ಉದ್ಘಾಟನೆ

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡ ಮತ್ತು ಪಂಜಿಗಾರು ಶಾಖೆಯ ಉದ್ಘಾಟನೆ ಜೂ. 19ರಂದು ನಡೆಯಿತು.ಸಂಘದ ಮಾಜಿ ಅಧ್ಯಕ್ಷ ಮತ್ತು ಸ್ಕಾಡ್ಸ್ ಲಿ. ಮಂಗಳೂರಿನ ಮಾಜಿ ಅಧ್ಯಕ್ಷ ವಾರಣಾಶಿ ಗೋಪಾಲಕೃಷ್ಣ ಪಂಜಿಗಾರು ಶಾಖೆಯನ್ನು ಉದ್ಘಾಟಿಸಿದರು. ಬಾಳಿಲ ಶಾಖೆಯ ನೂತನ ಗೋದಾಮು ಕಟ್ಟಡದ ಉದ್ಘಾಟನೆಯನ್ನು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು...
Ad Widget

ಜೂ.25: ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟ ಮಾಡಿದವರಿಗೆ ಗೌರವಾರ್ಪಣೆ ಹಾಗು ‘ಸಂಕೋಲೆ ಸಂಗ್ರಾಮ ಸ್ವಾತಂತ್ರ್ಯ’ ಪುಸ್ತಕ ಬಿಡುಗಡೆ

ಮಂಥನ ವೇದಿಕೆ ಸುಳ್ಯ, ಸೇವಾಭಾರತಿ ಹೆಲ್ಪ್‌ಲೈನ್ ಟ್ರಸ್ಟ್‌ ವತಿಯಿಂದ ತುರ್ತು ಪರಿಸ್ಥಿತಿಯ ಕರಾಳ ನೆನಪುಗಳು, ಹೋರಾಟಗಾರರಿಗೆ ಗೌರವಾರ್ಪಣೆ ಹಾಗೂ “ಸಂಕೋಲೆ -ಸಂಗ್ರಾಮ-ಸ್ವಾತಂತ್ರ್ಯ” ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ. 25ರಂದು ಸುಳ್ಯದ ಶ್ರೀ ಕುರುಂಜಿ ಜಾನಕಿ ವೆಂಕಟರಮಣ ಸಭಾಭವನದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಪ್ರದ್ಯುಮ್ನ ಉಬರಡ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುರ್ತು ಪರಿಸ್ಥಿತಿಯ ಸಂದರ್ಭ...

ಸುಬ್ರಹ್ಮಣ್ಯ : ಎಸ್ ಎಸ್ ಪಿ ಯು ಕಾಲೇಜಿಗೆ 91 ಶೇ. ಫಲಿತಾಂಶ – 591 ಅಂಕ ಗಳಿಸಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಸ್ವಾತಿ ಜಿ ಆರ್

(ವರದಿ : ಅನನ್ಯ ಸುಬ್ರಹ್ಮಣ್ಯ) ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತಕ್ಕೊಳಪಟ್ಟ ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ೨೦೨೧-೨೨ನೇ ಸಾಲಿನ ಪಿ.ಯು.ಸಿ. ಪರೀಕ್ಷೆಗೆ ಪರೀಕ್ಷೆಗೆ ಹಾಜರಾದ ಒಟ್ಟು ೩೨೯ ವಿದ್ಯಾರ್ಥಿಗಳಲ್ಲಿ ೩೦೧ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಇವರಲ್ಲಿ ೭೧ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, ೧೮೬ ಮಕ್ಕಳು ಪ್ರಥಮ ಶ್ರೇಣಿಯಲ್ಲಿ,೩೭ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ೧೩ ವಿದ್ಯಾರ್ಥಿಗಳು...

ಜೂ.23 ; ಎನ್.ಎಂ.ಸಿ.ಯಲ್ಲಿ ಮಂಗಳೂರು ವಿವಿ ಮಟ್ಟದ ಅಂತರ್ ಕಾಲೇಜು ಹಗ್ಗಜಗ್ಗಾಟ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಹಗ್ಗ ಜಗ್ಗಾಟ ಸ್ಪರ್ಧೆಯು ಇದೇ ಬರುವ 23 ಜೂನ್ 2022ರಂದು ನಡೆಯಲಿದೆ. ಈ ಪಂದ್ಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ ಸುಮಾರು 32 ಪುರುಷರ ಮತ್ತು 30 ಮಹಿಳಾ ತಂಡಗಳು ಭಾಗವಹಿಸಲಿವೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಅಜ್ಜಾವರ : ಪ್ರತಾಪ ಯುವಕ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ

ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.12 ರಂದು ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಶಿವಪ್ರಕಾಶ್ ಅಡ್ಪಂಗಾಯವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವಜನ ಸಂಯುಕ್ತ ಮಂಡಳಿ ಯ ಪೂರ್ವ ಅಧ್ಯಕ್ಷರಾದ ದಿನೇಶ್ ಮಾಡಪ್ಪಾಡಿ ಯವರು ಉದ್ಘಾಟಿಸಿದರು.ನೂತನ ಪದಾಧಿಕಾರಿಗಳಿಗೆ ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ದಯಾನಂದ ರವರು...

ಜೂ.22 : ಜಯನಗರದಲ್ಲಿ ನೂತನವಾಗಿ ಅಭಿವೃದ್ಧಿಗೊಂಡ ರುದ್ರಭೂಮಿ ಹಸ್ತಾಂತರ

ಸುಳ್ಯ ರೋಟರಿ ಕ್ಲಬ್ ವತಿಯಿಂದ ಜಯನಗರದಲ್ಲಿ ನೂತನವಾಗಿ ನಿರ್ಮಾಣ ಆಗುತ್ತಿರುವ ರುದ್ರಭೂಮಿಯ ಬಗ್ಗೆ ಕ್ಲಬ್ ಅಧ್ಯಕ್ಷ ಪ್ರಭಾಕರ ನಾಯರ್ ಇಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ರೊಟರಿ ಕ್ಲಬ್ ಸುಳ್ಯ 2021-22ರ ಅವಧಿಯ ಜಿಲ್ಲಾ ಯೋಜನೆಯಂತೆ ಸುಳ್ಯ ನಗರ ಪಂಚಾಯತ್ ಅಧೀನದಲ್ಲಿರುವ ಜಯನಗರದಲ್ಲಿ ನೂತನವಾಗಿ ಅಭಿವೃದ್ಧಿಗೊಂಡಿರುವ ಸಾರ್ವಜನಿಕ ರುದ್ರಭೂಮಿಯನ್ನು ಜೂ.22 ರಂದು ಶಾಸಕರು ಮತ್ತು ಸಚಿವರಾದ ಎಸ್....

ಹರಿಹರ ಪಲ್ಲತ್ತಡ್ಕ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

2021-22ನೇ ಸಾಲಿನ ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟವಾಗಿದ್ದು, ಹರಿಹರ ಪಲ್ಲತ್ತಡ್ಕ ಸರಕಾರಿ ಪದವಿ ಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.ದ್ವಿತೀಯ ಪಿ.ಯು.ಸಿ ಕಲಾ ವಿಭಾಗದಲ್ಲಿ 2 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಬ್ಬರೂ ವಿದ್ಯಾರ್ಥಿಗಳು ಸಹ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಸೌಮ್ಯ 490 ಅಂಕ ಹಾಗೂ ಗೀತಾಶ್ರೀ 450 ಅಂಕಗಳನ್ನು ಗಳಿಸಿದ್ದಾರೆ. ವರದಿ :- ಉಲ್ಲಾಸ್...

ಜೂ.20 ; ಮಡಪ್ಪಾಡಿಯಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಗ್ರಾಮ ಪಂಚಾಯತ್‌ ಮಡಪ್ಪಾಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು ಮತ್ತು ಸುಳ್ಯ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಡಾ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ನೇತ್ರ...

ಪಿಯುಸಿ ಫಲಿತಾಂಶ : ಗುತ್ತಿಗಾರು ಪ.ಪೂ.ಕಾಲೇಜಿಗೆ 96 ಶೇ. ಫಲಿತಾಂಶ

2021-22 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ ಕಲಾ ಹಾಗೂ ವಾಣಿಜ್ಯ ವಿಭಾಗದಿಂದ ಒಟ್ಟು 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿ 96.07% ಪಡೆದುಕೊಂಡಿದೆ.ಇದರಲ್ಲಿ 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ10 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 07 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ...
Loading posts...

All posts loaded

No more posts

error: Content is protected !!