Ad Widget

ಬರೆ ಕುಸಿದು ನಿರ್ಮಾಣ ಹಂತದಲ್ಲಿದ್ದ ಮನೆಗೆ ಸಂಪೂರ್ಣ ಹಾನಿ – ಅಪಾರ ನಷ್ಟ, ಅಧಿಕಾರಿಗಳ ಭೇಟಿ

ಹರಿಹರ ಪಲ್ಲತ್ತಡ್ಕ(ಜು.10) : ತಡ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹರಿಹರ ಪಲ್ಲತ್ತಡ್ಕ ಗ್ರಾಮದ ತೇಜಕುಮಾರ್ ಕಜ್ಜೋಡಿ ಎಂಬುವವರ ನೂತನವಾಗಿ ನಿರ್ಮಿಸಿದ ಮನೆಯ ಮೇಲೆ ಗುಡ್ಡ ಕುಸಿತವಾಗಿ ಮನೆಗೆ ಸಂಪೂರ್ಣ ಹಾನಿಯಾಗಿದ್ದು, ಅಪಾರ ನಷ್ಟ ಉಂಟಾಗಿದೆ.


ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಪಂಜ ಕಂದಾಯ ನಿರೀಕ್ಷಕರಾದ ಶಂಕರ್.ಎಮ್.ಎಲ್, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಮಣಿಯಾನ, ಗ್ರಾಮ ಲೆಕ್ಕಾಧಿಕಾರಿ ಮಧು.ಕೆ.ಬಿ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಅಂಙಣ, ಗ್ರಾಮ ಪಂಚಾಯತ್ ಸದಸ್ಯರಾದ ದಿವಾಕರ ಮುಂಡಾಜೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!