Ad Widget

ಬಾಳುಗೋಡು : ಕಾಲು ಸೇತುವೆ ಕೊಚ್ಚಿ ಹೋದ ಸ್ಥಳಕ್ಕೆ ತಹಶೀಲ್ದಾರ್ ಭೇಟಿ – ತೂಗು ಸೇತುವೆ ನಿರ್ಮಿಸುವ ಭರವಸೆ

ಬಾಳುಗೋಡು ಗ್ರಾಮದ ಉಪ್ಪುಕಳ ನಿವಾಸಿಗಳ ಸಂಪರ್ಕ ಕೊಂಡಿಯಾಗಿದ್ದ ಮಾನವ ನಿರ್ಮಿತ ಎರಡು ಕಾಲು ಸೇತುವೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿ ದ್ವೀಪದಂತಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರಗೊಂಡಿತ್ತು. ಇದನ್ನು ಗಮನಿಸಿದ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ ಭೇಟಿ ಮಾಡಿ ಜನರ ಅಹವಾಲು ಸ್ವೀಕರಿಸಿದರು. ತುರ್ತು ಕಾಲು ಸೇತುವೆ ದುರಸ್ತಿ ಹಾಗೂ ಮಳೆ ಕಡಿಮೆ ಆದ ಕೂಡಲೇ ತೂಗು ಸೇತುವೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ಭವಾನಿಶಂಕರ್ , ಇಂಜಿನಿಯರ್, ಹರಿಹರ ಪಲತಡ್ಕ ಗ್ರಾಮ ಪಂಚಾಯತ್ ಪಿಡಿಒ ಪುರುಷೋತ್ತಮ, ಗ್ರಾಮ ಲೆಕ್ಕಾಧಿಕಾರಿ ಮಧು ಕೆ.ಬಿ‌. ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!