Ad Widget

ಕಾರ್ಯಕರ್ತನ ನೋವಿಗೆ ಸ್ಪಂದಿಸಿದ ಕೆಪಿಸಿಸಿ ಸಂಯೋಜಕ ನಂದಕುಮಾರ್

ತಾಲೂಕಿನ ಹರಿಹರ ಪಲ್ಲತಡ್ಕ ಗ್ರಾಮದ ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತನ ನೂತನ ಮನೆಯು ವಿಪರೀತವಾದ ಮಳೆಯಿಂದಾಗಿ ಪ್ರಕೃತಿ ವಿಕೋಪಕ್ಕೊಳಪಟ್ಟು ಗುಡ್ಡ ಕುಸಿದು ಹಾನಿಗೀಡಾಗಿದ್ದ ವಿಚಾರವನ್ನು ತಿಳಿದ ಕೆಪಿಸಿಸಿ ಸಂಯೋಜಕರಾದ ಹಾಗೂ ಕಡಬ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ನಂದಕುಮಾರ್ ರವರು ತಕ್ಷಣ ಸ್ಥಳಕ್ಕಾಗಮಿಸಿ ಸ್ಥಳೀಯ ಸಮಾಜಸೇವಾ ಸಂಘಟನೆಯಲ್ಲಿ ಒಂದಾದ ಲಯನ್ಸ್ ಕ್ಲಬ್ ರವರ ಜೊತೆಗೆ ಕೈಜೋಡಿಸಿ ಸಹಾಯಹಸ್ತ ಚಾಚಿದರು.

ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ ಜಯರಾಮ್, ಮಾಜಿ ಜಿ. ಪಂ. ಸದಸ್ಯ ಭರತ್ ಮುಂಡೋಡಿ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪಿ. ಯಸ್. ಗಂಗಾಧರ್, ಕಡಬ ಬ್ಲಾಕ್ ಉಪಾಧ್ಯಕ್ಷರಾದ ರವೀಂದ್ರ ಕುಮಾರ್ ರುದ್ರಪಾದ, ವಿಮಲ ರಂಗಯ್ಯ, ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರೊ. ರಂಗಯ್ಯ ಶೆಟ್ಟಿಗಾರ್, ಕಾರ್ಯದರ್ಶಿ ಸತೀಶ್ ಕೂಜುಗೋಡು, ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ಚೇತನ್ ಕಜೆಗದ್ದೆ, ಕಡಬ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷರಾದ ಶೋಬಿತ್ ನಾಯರ್ ಸುಬ್ರಹ್ಮಣ್ಯ, ಸುರೇಶ್ ಉಜಿರಡ್ಕ ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!