Ad Widget

ಜು.23: ಗುತ್ತಿಗಾರು ಸೊಸೈಟಿಯ ನೂತನ ದೀನ್ ದಯಾಳ್ ರೈತ ಸಭಾಭವನ ಉದ್ಘಾಟನೆ – ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಆಗಮನ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸುಮಾರು 2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ದೀನ್ ದಯಾಳ್ ರೈತ ಸಭಾಭವನ ಜು. 23 ರಂದು ಉದ್ಘಾಟನೆಗೊಳ್ಳಲಿದೆ. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಭಾಭವನ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ವಹಿಸಲಿದ್ದಾರೆ. ಗೊಬ್ಬರ ದಾಸ್ತಾನು ಮಳಿಗೆ ಉದ್ಘಾಟನೆಯನ್ನು ದ. ಕ...

ಬೆಳ್ಳಾರೆ : ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – 8 ಮಂದಿ ಬಂಧನ

ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....
Ad Widget

ಬೆಳ್ಳಾರೆ : ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – 8 ಮಂದಿ ಬಂಧನ

ಕ್ಷುಲ್ಲಕ ಕಾರಣಗಳಿಂದ ತಾಲೂಕಿನ ಕಳಂಜ ಗ್ರಾಮದಲ್ಲಿ ಹಲ್ಲೆಗೊಳಗಾಗಿದ್ದ ಮುಹಮ್ಮದ್ ಮಸೂದ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಪರಿಚಯದ ಇಬ್ಬರು ಯುವಕರ ನಡುವೆ ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದ ಬಳಿಕ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಪಡಿಸುವುದಾಗಿ ಕರೆಸಿಕೊಂಡ ತಂಡ, ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ....

ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ – ಪಿ.ಸಿ ಜಯರಾಮ

ಜನಸಾಮಾನ್ಯರ ಸೇವೆ ಮಾಡಬೇಕಾದ ಶಾಸಕರು ಕೇವಲ ಕಾರ್ಯಕರ್ತರ ಸೇವೆ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು. 21 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆದು ಶಾಸಕರಾಗಿ ಹಾಗೂ ಸಚಿವರಾಗಿ ಸುಳ್ಯದಲ್ಲಿ ಎಸ್ ಅಂಗಾರ ಆಯ್ಕೆಯಾಗಿದ್ದಾರೆ. ಇವರು ಪಕ್ಷದ ಸೇವೆ ಮಾಡುವುದು ಮಾತ್ರವಲ್ಲದೆ...

ಜು.24 : ನೆಲ್ಲೂರು ಕೆಮ್ರಾಜೆ ಸೊಸೈಟಿಯ ನೂತನ ಸಭಾಭವನ ಉದ್ಘಾಟನೆ

ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ನೂತನ ಸಭಾಭವನ ಸುಮಾರು ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಜು. 24 ರಂದು ಉದ್ಘಾಟನೆಗೊಳ್ಳಲಿದೆ. ಸಭಾಭವನವನ್ನು ಬಂದರು ಮತ್ತು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮ ವನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸಹಕಾರ ರತ್ನ ಡಾ|| ಎ.ಎನ್.ರಾಜೇಂದ್ರ ಕುಮಾರ್...

ನಿರಂತರ ಅಧ್ಯಯನ ವಿದ್ಯಾರ್ಥಿಗಳ ಯಶಸ್ಸಿನ ಕೀಲಿಕೈ -ಕೆ.ಆರ್.ಗಂಗಾಧರ್

ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜಿನ ಸಂಚಾಲಕರಾದ ಶ್ರೀ ಕೆ ಆರ್.ಗಂಗಾಧರ್ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಯಶಸ್ಸು ಪಡೆಯಬೇಕಾದರೆ ನಿರಂತರ ಅಧ್ಯಯನವೇ ಪ್ರಮುಖವಾಗುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದರು. ಕಾಲೇಜಿನ ವಿದ್ಯಾರ್ಥಿ...

ಬೆಳ್ಳಾರೆ: ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ,ಇದರ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವತಿಯಿಂದ, ಸ್ನಾತಕೋತ್ತರ ಸಮಾಜ ಕಾರ್ಯ ವೇದಿಕೆಯ ಉದ್ಘಾಟನೆ ಹಾಗೂ ಒಂದು ದಿನದ "ವ್ಯಕ್ತಿತ್ವ ವಿಕಾಸನ" ಕಾಕಾರ್ಯಕ್ರಮವು ಜು.20 ರಂದು ಕಾಲೇಜಿನ ಬಾಬಾ ಸಾಹೇಬ್ ಬಿ.ಆರ್ . ಅಂಬೇಡ್ಕರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ...
error: Content is protected !!