Ad Widget

ಪ್ರವೀಣ್ ಹತ್ಯೆಗೆ ಖಂಡನೆ ವ್ಯಕ್ತಪಡಿಸಿದ ಬ್ಲಾಕ್ ಕಾಂಗ್ರೆಸ್ – ದುಷ್ಕರ್ಮಿಗಳ ಶೀಘ್ರ ಬಂಧಿಸಿ ಕಠಿಣ ಶಿಕ್ಷೆ ನೀಡಲು ಪಿ.ಸಿ.ಜಯರಾಂ ಆಗ್ರಹ

ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬುವವರ ಭೀಕರ ಹತ್ಯೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಮೊನ್ನೆ ನಡೆದ ಮಸೂದ್ ಎಂಬ ಯುವಕನ ಹತ್ಯೆ, ನಿನ್ನೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಇಂತಹ ದುಷ್ಕೃತ್ಯಗಳನ್ನು ಜಾತಿ, ಮತ, ಪಕ್ಷಗಳನ್ನು ಮೀರಿ ಮನುಕುಲದ ಎಲ್ಲರೂ ಖಂಡಿಸುವುದು ಅನಿವಾರ್ಯವಾಗಿರುತ್ತದೆ. ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು...

ಪ್ರವೀಣ್ ಹತ್ಯೆ ಪ್ರಕರಣ; ಶಂಕಿತರು ಪೊಲೀಸ್ ವಶಕ್ಕೆ

ಬೆಳ್ಳಾರೆ: ಬಿಜೆಪಿ ಯುವ ಮುಖಂಡ‌ ಪ್ರವೀಣ್ ನೆಟ್ಟಾರು ‌ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆಯಲ್ಲಿ ಏಳು ಜನರನ್ನು ವಶ ಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
Ad Widget

ಸುಳ್ಯ: ಪ್ರಕ್ಷುಬ್ಧ ವಾತಾವರಣ – ಬಂದ್ ಮಾಡಲು ಮನವಿ

https://youtu.be/dbY-mZhj9rk ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಬೆಂಬಲ ನೀಡಲು ಮನವಿ ಮಾಡುತ್ತಿದೆ. ಪೇಟೆಯಲ್ಲಿ ಹಿಂದೂ ಸಂಘಟನೆಗಳಿಂದ ಮೆರವಣಿಗೆ ನಡೆಯುತ್ತಿದೆ. https://youtu.be/ohVZ0MKeWGU ಗಾಂಧಿನಗರದಲ್ಲಿ ಅಂಗಡಿಗಳು ತೆರೆದಿದ್ದ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಜೊತೆಗೆ ಮುಸ್ಲಿಂ ವರ್ತಕರು ಪ್ರತಿರೋಧ ತೋರಿದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಖಾಸಗಿ ಬಸ್ ನಿಲ್ದಾಣದ ಟಯರ್ ಬೆಂಕಿ ಹಚ್ಚಲಾಗಿದೆ.

ಸುಳ್ಯ: ಬಂದ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದೆ. ಜತೆಗೆ ಶಾಲಾ ಕಾಲೇಜುಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಗುತ್ತಿಗಾರು : ಸ್ವಯಂ ಪ್ರೇರಿತ ಬಂದ್ ಗೆ ನಿರ್ಧರಿಸಿದ ವರ್ತಕರು

ಬೆಳ್ಳಾರೆಯಲ್ಲಿ ನಿನ್ನೆ ನಡೆದ ಅಮಾಯಕ ಹತ್ಯೆ ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲು ವರ್ತಕರು ತೀರ್ಮಾನಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಎಂಬ ಯುವಕನ ನಿನ್ನೆ ದುಷ್ಕರ್ಮಿಗಳ ಕುಕೃತ್ಯಕ್ಕೆ ಬಲಿಯಾಗಿದ್ದರು.

ಜು.27 ; ಪ್ರವೀಣ್ ಹತ್ಯೆ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ಸ್ವಯಂ ಪ್ರೇರಿತ ಬಂದ್

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ನಾಳೆ(ಜು.27) ಪುತ್ತೂರು, ಸುಳ್ಯ, ಕಡಬದಾದ್ಯಂತ ಸ್ವಯಂ ಪ್ರೇರಿತವಾಗಿ ಹಿಂದೂ ಸಂಘಟನೆಗಳು ಕರೆ ನೀಡಿವೆ ಎಂದು ವರದಿಯಾಗಿದೆ.

ಭೀಕರವಾಗಿ ದಾಳಿಗೆ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಮೃತ್ಯು – ಮೂವರಿಂದ ಕೃತ್ಯ

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಲೆಗೆ ಗಂಭೀರವಾದ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟರು ಆಗಮಿಸಿದ್ದಾರೆ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸುತ್ತಿದ್ದಾರೆ.ಈ ವೇಳೆ ಪ್ರವೀಣ್ ಅವರು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆದರೆ ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಯದ್ವಾತದ್ವಾ ದಾಳಿ ಸ್ಟಾಕ್. ಬೈಕ್ ಕೇರಳ ರಿಜಿಸ್ಟ್ರೇಷನ್ ಹೊಂದಿತ್ತು ಎಂಬ ವದಂತಿ ಸ್ಥಳೀಯವಾಗಿ ಹಬ್ಬಿದ್ದು...
error: Content is protected !!