Ad Widget

ನಾವು ಬರೀ ಹೇಳುವುದಿಲ್ಲ!! ಸೂಕ್ತ ವ್ಯವಸ್ಥೆ ಖಂಡಿತಾ ಆಗುತ್ತದೆ – ಸಿಎಂ ಬೊಮ್ಮಾಯಿ


ಬೆಳ್ಳಾರೆ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರಾಥಮಿಕ ತನಿಖೆ ಮುಗಿದಿದ್ದು ಕೃತ್ಯಕ್ಕೆ ಸಹಕರಿಸಿದವರನ್ನು ಬಂಧಿಸಲಾಗಿದೆ. ಈ ಜಾಲ ದೇಶಾದ್ಯಂತವೂ ಹಬ್ಬಿದ್ದು ನಮ್ಮ ಸರಕಾರ ಬರೀ ಹೇಳುವುದಲ್ಲ.ಅವರನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನೆಟ್ಟಾರಿನ ಪ್ರವೀಣ್ ಅವರ ಮನೆಗೆ ಸಿಎಂ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ತಿಳಿಸಿದರು.
ತಾಯಿಗೆ ಅಭಯ: ನಿಮ್ಮ ಮಗನ ಸೇವೆಯನ್ನು ಪಕ್ಷವು ಎಂದಿಗೂ ನೆನಪಿಟ್ಟುಕೊಳ್ಳುತ್ತದೆ ಹಾಗೂ ನಿಮ್ಮ ಕುಟುಂಬದ ಜೊತೆ ಪಕ್ಷ ಕೊನೆವರೆಗೂ ಇರುತ್ತದೆ ಎಂದು ಪ್ರವೀಣ್ ತಾಯಿಗೆ ಸಿಎಂ ಅಭಯ ನೀಡಿದ್ದಾರೆ. ನಮಗೆ ಬಂದ ಸ್ಥಿತಿ ಇನ್ನೊಬ್ಬರಿಗೆ ಬಾರದಂತೆ ನೋಡಿಕೊಳ್ಳಲು ಪ್ರವೀಣ್ ತಾಯಿ ಸಿಎಂ ಅವರನ್ನು ಒತ್ತಾಯಿಸಿದ್ದಾರೆ.
ಶೀಘ್ರ ಹೊಸ ತನಿಖಾ ನಿಗ್ರಹ ದಳ ಆರಂಭ: ಉಗ್ರಗಾಮಿ ಶಕ್ತಿಗಳನ್ನು ಮಟ್ಟ ಹಾಕಲು ಶೀಘ್ರವೇ ಹೊಸ ತನಿಖಾ ದಳವನ್ನು ಜಾರಿಗೆ ತರಲಿದ್ದೇವೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಗೃಹಸಚಿವ ಅರಗ ಜ್ಞಾನೇಂದ್ರ, ಸಚಿವ ಸುನೀಲ್ ಕುಮಾರ್, ಎಸ್.ಅಂಗಾರ, ಬಿಜೆಪಿ ರಾಜ್ಯಾಧ್ಯಕ್ಷ ನ.ಕಟೀಲ್, ಸಿಟಿ ರವಿ, ಪ್ರಭಾಕರ್ ಭಟ್ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!