- Saturday
- April 19th, 2025

ಸುಳ್ಯ ತಾಲೂಕಿನಾದ್ಯಂತ ಜು.27 ರಂದು ಸುರಿದ ಭಾರಿ ಮಳೆಗೆ ವಿವಿಧೆಡೆ ಅವಾಂತರವನ್ನೇ ಸೃಷ್ಟಿ ಮಾಡಿದೆ. ಬರೆ ಕುಸಿತ, ಮರ ಬಿದ್ದು ವಿದ್ಯುತ್ ಲೈನ್ ಗೆ ಹಾನಿ ಸೇರಿದಂತೆ ತಾಲೂಕಿನಲ್ಲಿ ಜನ ತೊಂದರೆ ಅನುಭವಿಸುವಂತಾಯಿತು. ಕಾಯರ್ತೋಡಿಯ ಕೋಡಿಮಲೆ ಎಂಬಲ್ಲಿ ನಾರಾಯಣ ಆಚಾರ್ಯ ಅವರ ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ನಾರ್ಣಕಜೆ, ದೊಡ್ಡತೋಟ ಸಮೀಪ ರಸ್ತೆಗೆ ಬರೆ ಕುಸಿದು...

ಪರಮಪೂಜ್ಯಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಜನ್ಮದಿನೋತ್ಸವ ಗ್ರಾಮೋತ್ಸವ ಗುರುವಂದನೆ ಅಂಗವಾಗಿ ಸುಳ್ಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಮತ್ತು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಶಾಖೆ , ಗುರುದೇವ ಸೇವಾ ಬಳಗ ಸುಳ್ಯ ಕುಕ್ಕುಜಡ್ಕ ಮುರುಳ್ಯ ಇವುಗಳ ಸಹಭಾಗಿತ್ವದಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡೋತ್ಸವವು ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯಿತು....

ವೆಬ್ಸೈಟ್ ಗಳಲ್ಲಿ ಬಂದ ವರದಿಯ ಹೆಡ್ಡಿಂಗ್ ಬದಲಾವಣೆ ಮಾಡಿ ಸಮಾಜದಲ್ಲಿ ಆಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿ ಯತೀಶ್ ಬಂದನ ಎಂದು ವರದಿಯ ಹೆಡ್ಡಿಂಗ್ ನಲ್ಲಿ ಹೆಸರು ಬದಲಾಯಿಸಿ ಶೇರ್ ಮಾಡಲಾಗಿತ್ತು. ತನಿಖೆ ನಡೆಯುತ್ತಿದೆಯೇ ಹೊರತು ಇದುವರೆಗೆ ಯಾವುದೇ ಪ್ರಮುಖ ಆರೋಪಿ ಬಂಧನವಾಗಿಲ್ಲ. ಪತ್ತೆಯಾಗಿಲ್ಲ ಪೋಲೀಸ್ ಮೂಲಗಳಿಂದ ತಿಳಿದುಬಂದಿದೆ. ಈ...
ಬೆಳ್ಳಾರೆ ಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬುವವರ ಭೀಕರ ಹತ್ಯೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಮೊನ್ನೆ ನಡೆದ ಮಸೂದ್ ಎಂಬ ಯುವಕನ ಹತ್ಯೆ, ನಿನ್ನೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಇಂತಹ ದುಷ್ಕೃತ್ಯಗಳನ್ನು ಜಾತಿ, ಮತ, ಪಕ್ಷಗಳನ್ನು ಮೀರಿ ಮನುಕುಲದ ಎಲ್ಲರೂ ಖಂಡಿಸುವುದು ಅನಿವಾರ್ಯವಾಗಿರುತ್ತದೆ. ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು...

ಬೆಳ್ಳಾರೆ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ಳಾರೆಯಲ್ಲಿ ಏಳು ಜನರನ್ನು ವಶ ಪಡಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

https://youtu.be/dbY-mZhj9rk ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಬೆಂಬಲ ನೀಡಲು ಮನವಿ ಮಾಡುತ್ತಿದೆ. ಪೇಟೆಯಲ್ಲಿ ಹಿಂದೂ ಸಂಘಟನೆಗಳಿಂದ ಮೆರವಣಿಗೆ ನಡೆಯುತ್ತಿದೆ. https://youtu.be/ohVZ0MKeWGU ಗಾಂಧಿನಗರದಲ್ಲಿ ಅಂಗಡಿಗಳು ತೆರೆದಿದ್ದ ಹಿಂದೂ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ ಜೊತೆಗೆ ಮುಸ್ಲಿಂ ವರ್ತಕರು ಪ್ರತಿರೋಧ ತೋರಿದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಖಾಸಗಿ ಬಸ್ ನಿಲ್ದಾಣದ ಟಯರ್ ಬೆಂಕಿ ಹಚ್ಚಲಾಗಿದೆ.
ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಬಂದ್ ಗೆ ಕರೆ ಕೊಟ್ಟ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಿದೆ. ಜತೆಗೆ ಶಾಲಾ ಕಾಲೇಜುಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಬೆಳ್ಳಾರೆಯಲ್ಲಿ ನಿನ್ನೆ ನಡೆದ ಅಮಾಯಕ ಹತ್ಯೆ ಖಂಡಿಸಿ ಗುತ್ತಿಗಾರಿನಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲು ವರ್ತಕರು ತೀರ್ಮಾನಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟರು ಎಂಬ ಯುವಕನ ನಿನ್ನೆ ದುಷ್ಕರ್ಮಿಗಳ ಕುಕೃತ್ಯಕ್ಕೆ ಬಲಿಯಾಗಿದ್ದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ನಾಳೆ(ಜು.27) ಪುತ್ತೂರು, ಸುಳ್ಯ, ಕಡಬದಾದ್ಯಂತ ಸ್ವಯಂ ಪ್ರೇರಿತವಾಗಿ ಹಿಂದೂ ಸಂಘಟನೆಗಳು ಕರೆ ನೀಡಿವೆ ಎಂದು ವರದಿಯಾಗಿದೆ.

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಲೆಗೆ ಗಂಭೀರವಾದ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟರು ಆಗಮಿಸಿದ್ದಾರೆ ಮೇಲೆ ಮಾರಕಾಸ್ತ್ರಗಳಿಂದ ಏಕಾಏಕಿ ದಾಳಿ ನಡೆಸುತ್ತಿದ್ದಾರೆ.ಈ ವೇಳೆ ಪ್ರವೀಣ್ ಅವರು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆದರೆ ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಯದ್ವಾತದ್ವಾ ದಾಳಿ ಸ್ಟಾಕ್. ಬೈಕ್ ಕೇರಳ ರಿಜಿಸ್ಟ್ರೇಷನ್ ಹೊಂದಿತ್ತು ಎಂಬ ವದಂತಿ ಸ್ಥಳೀಯವಾಗಿ ಹಬ್ಬಿದ್ದು...

All posts loaded
No more posts