Ad Widget

ಆ.31 ರಂದು “ತಂಟೆಪ್ಪಾಡಿ ಶಂಭಟ್ಟ” ಎಂಬ ನೆನಪಿನ ಗ್ರಂಥ ಬಿಡುಗಡೆ

ಬೆಳ್ಳಾರೆ: ತಂಟೆಪ್ಪಾಡಿ ಶಂಭಟ್ಟರು ಹಿರಿಯ ಯಕ್ಷಗಾನ ಮದ್ದಳೆ ಕಲಾವಿದರು. ದಾಮೋದರ ಮಂಡೆಚ್ಚ , ಅಜ್ಜನಗದ್ದೆ ಗಣಪಯ್ಯ ಭಾಗವತರ ಸಮಕಾಲೀನರು. ಅವರಿಗೆ ಹಿಮ್ಮೇಳ ವಾದಕರಾಗಿಯೂ ಕಲಾ ಸೇವೆ ಮಾಡಿದವರು. ಯಕ್ಷಗಾನ ಕಲಾವಿದರಾದ ಇವರ ಶತಮಾನೋತ್ಸವದ ವಿಶೇಷ ಸಂದರ್ಭದಲ್ಲಿ “ತಂಟೆಪ್ಪಾಡಿ ಶಂಭಟ್ಟ” ಎಂಬ ನೆನಪಿನ ಗ್ರಂಥ ಬಿಡುಗಡೆ ಸಮಾರಂಭವು ಆ.31ರಂದು ಚೌತಿ ದಿನದಂದು ತಂಟೆಪ್ಪಾಡಿ ಮನೆಯಲ್ಲಿ ಜರಗಲಿದೆ. ಸಮಾರಂಭದಲ್ಲಿ ಗ್ರಂಥದ ಅನಾವರಣವನ್ನು ಖ್ಯಾತ ಕವಿಗಳೂ ಹಿರಿಯ ಸಾಹಿತಿಗಳೂ ಆದ ಸುಬ್ರಾಯ ಚೊಕ್ಕಾಡಿಯವರು ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಹವ್ಯಕ ವಿಭಾಗದ ಗುರಿಕಾರರೂ ಆಗಿರುವ ಮುಂದುಗಡೆ ಸುಬ್ರಹ್ಮಣ್ಯರವರು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ತಂಟೆಪ್ಪಾಡಿ ಮನೆತನದ ಗುರುಗಳಾದ ವಡ್ಯ ಶ್ರೀಕೃಷ್ಣ ಭಟ್ಟರು ಉಪಸ್ಥಿತರಿದ್ದಾರೆ ಎಂದು ತಂಟೆಪ್ಪಾಡಿ ಶಂಭಟ್ನ ಪೂರ್ಣಗೊಂಡ ಮಗ ಹಾಗೂ ಕಾರ್ಯಕ್ರಮದ ಸಂಯೋಜಕರು ಆಗಿರುವ ಶಿವರಾಮ ಭಟ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

. . . . . . . . .

ಈ ಕೃತಿಯಲ್ಲಿ ಶಂಭಟ್ಟರ ವ್ಯಕ್ತಿತ್ವ , ಸಾಧನೆ ಮತ್ತು ಜೀವನ ಚಿತ್ರಣಗಳ ಜೊತೆಗೆ ತಂಟೆಪ್ಪಾಡಿ , ಕಾಯಾರ , ಚೂಂತಾರು ಮತ್ತು ಪಾರೆ ದೀಕ್ಷಿತ ಕುಟುಂಬಗಳ ಚರಿತ್ರೆಯ ಸಂಗ್ರಹ ಕೃತಿಯೂ ಆಗಿದೆ. “ತಂಟೆಪ್ಪಾಡಿ ಶಂಭಟ್ಟ” ಕೃತಿಯು ಬೆಳಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರೂ ತಂಟೆಪ್ಪಾಡಿ ಕುಟುಂಬದ ಸದಸ್ಯರೂ ಆಗಿರುವ ರಾಮಕೃಷ್ಣ ಭಟ್ ಚೂಂತಾರ್ ರವರಿಂದ ಸಂಗ್ರಹಿಸಲ್ಪಟ್ಟಿದ್ದು, ಡಾ. ಮುರಲೀಮೋಹನ ಚೂಂತಾರು ರವರ ನೇತೃತ್ವದ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಮೂಲಕ ಪ್ರಕಾಶನಗೊಳ್ಳುತ್ತಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading