
ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ ನಡೆದ 9ನೇ ವರ್ಷದ ಅಟ್ಟಿ ಮಡಿಕೆ ಒಡೆಯುವ ಸ್ಪರ್ಧೆಯಲ್ಲಿ ಹಿಂದು ಜಾಗರಣ ವೇದಿಕೆ, ಉಬರಡ್ಕ ತಂಡವು ಪ್ರಥಮ ಸ್ಥಾನ ಪಡೆದಿದ್ದು ಬಹುಮಾನದ ಮೊತ್ತವನ್ನು ನೆರವು ನೀಡುವ ಮೂಲಕ ಸಮಾಜಮುಖಿ ಕಾರ್ಯ ಮಾಡಿದ್ದು ಜನರ ಮೆಚ್ಚಗೆಗೆ ಪಾತ್ರವಾಗಿದೆ. ಗುತ್ತಿಗಾರಿನ ವಿಶ್ವನಾಥ್ ಹೇಮಾವತಿ ದಂಪತಿಗಳ ಪುತ್ರಿ ಸಮೀಕ್ಷಾ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ಆಸ್ಪತ್ರೆ ವೆಚ್ಚಗಳಿಗೆ ಈ ಹಣವನ್ನು ನೀಡುವುದಾಗಿ ತಂಡ ತಿಳಿಸಿದೆ.